ಸಮದೃಷ್ಟಿ

Author : ಶ್ರೀರಾಮ ಇಟ್ಟಣ್ಣವರ

Pages 85

₹ 60.00




Year of Publication: 2006
Published by: ಶ್ರೀ ರಾಮಸ್ವಾಮಿ ವಿದ್ಯಾಸಂಸ್ಥೆ
Address: ಸೂಳೇಬಾವಿ,  ಹುನಗುಂದ ತಾಲೂಕು ಬಾಗಲಕೋಟೆ ಜಿಲ್ಲೆ

Synopsys

ಜಾನಪದ ತಜ್ಞ ಶ್ರೀ ರಾಮ ಇಟ್ಟಣ್ಣವರ ಸಂಪಾದಿತ ಕೃತಿ- ಸಮದೃಷ್ಟಿ. ಎಚ್. ವೈ. ಮೇಟಿ ಅವರಿಗೆ 60 ತುಂಬಿದ ಸಂದರ್ಭದಲ್ಲಿ ಹೊರತಂದ ಅಭಿನಂದನ ಗ್ರಂಥವಿದು. ಶಾಸಕ, ಸಂಸದ, ಸಚಿವರಾಗಿ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ  ಮೇಟಿಯವರ ವ್ಯಕ್ತಿತ್ವದ ಹಲವು ಮುಖಗಳನ್ನು ಕುರಿತು ಅವರ ಆತ್ಮೀಯರು ಬರೆದ ಲೇಖನಗಳನ್ನಿಲ್ಲಿ ಸಂಪಾದಿಸಲಾಗಿದೆ.

 

About the Author

ಶ್ರೀರಾಮ ಇಟ್ಟಣ್ಣವರ
(01 June 1948)

ಶ್ರೀಕೃಷ್ಣ ಪಾರಿಜಾತ- ಒಂದು ಅಧ್ಯಯನ ಎಂಬ ವಿಷಯದ ಮೇಲೆ ಪಿಎಚ್‌.ಡಿ . ಪದವಿ ಪಡೆದಿರುವ ಶ್ರೀರಾಮ ಇಟ್ಟಣ್ಣವರ ಅವರು ಬೀಳಗಿಯ ಶ್ರೀಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಬಯಲಾಟ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾಗಿರುವ ಇಟ್ಟಣ್ಣವರ ಅವರು ಬಯಲಾಟ-ಕೃಷ್ಣ ಪಾರಿಜಾತ ಹಾಗೂ ಜಾನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಹೊಳಿಸಾಲ ಬಳ್ಳಿ; ಗಾಲಿ ಉಳ್ಳತೈತಿ; ನೂರು ಶಿಶುಗೀತೆಗಳು; ಹಾಡುಣು ಬಾಪ್ರೇಮದ ಪಾಡಾ; ಹೊತ್ತು ಮೂಡುವ ಸಮಯ (ಕಾವ್ಯ), ಪಾರಿಜಾತದವರು (ನಾಟಕ),  ಜನಪದ ಪಶುವೈದ್ಯ ಬೀಳಗಿ ಸಿದ್ಧಪ್ಪ; ಕೊಣ್ಣೂರ ಕರಿಸಿದ್ದೇಶ್ವರ ದೇವಸ್ಥಾನ (ಜಾನಪದೀಯ) ಹಲಗಲಿ-ಗ್ರಾಮ ಚಾನಪದ (ಅಧ್ಯಯನ), ಲಾವಣಿ: ಸಣ್ಣಾಟ (ಸಂಶೋಧನೆ)  ತಟ್ಟಿ ಚಿನ್ನ-ಸಣ್ಣಾಟ; ...

READ MORE

Related Books