ಸಮಗ್ರ ದಾಸ ಸಾಹಿತ್ಯ ಸಂಪುಟ-11- ಭಾಗ 1

Author : ಕೃಷ್ಣ ಕೊಲ್ಹಾರ ಕುಲಕರ್ಣಿ

Pages 341

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 560002

Synopsys

‘ಸಮಗ್ರ ದಾಸ ಸಾಹಿತ್ಯ ಸಂಪುಟ-11- ಭಾಗ 1’ ಕಾಖಂಡಕಿ ಕೃಷ್ಣದಾಸರ ಕೀರ್ತನೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಕಟಗೊಂಡಿರುವ ಕೃತಿ. ಈ ಸಂಪುಟವನ್ನು ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಸಂಪಾದಿಸಿದ್ದಾರೆ. ಹರಿದಾಸರು, ಶ್ರೇಷ್ಠ ಅನುಭಾವ ಕವಿಗಳೂ ಆದ ಕಾಖಂಡಕಿಯ ಮಹಿಪತಿ ರಾಯರ ಮಕ್ಕಳು ಕೃಷ್ಣದಾಸರು. ತಂದೆಯ ದಾರಿಯಲ್ಲಿ ಸಾಗಿದ ಕೃಷ್ಣದಾಸರು ಏಳುನೂರಕ್ಕೂ ಮಿಕ್ಕಿದ ಕೀರ್ತನೆಗಳನ್ನು ಬರೆದಿದ್ದಾರೆ. ಉಗಾಭೋಗ, ಒಂದು ಸುಳಾದಿ ಅನೇಕ ವಚನಗಳ ಜೊತೆಗೆ ಅನೇಕ ಖಂಡ ಕಾವ್ಯಗಳನ್ನೂ, ಆಖ್ಯಾನಗಳನ್ನೂ ರಚಿಸಿದ್ದಾರೆ ವಿಜಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೃಷ್ಣದಾಸರ ಕೃತಿಗಳು ಜನಪ್ರಿಯವಾಗಿವೆ. ಈ ಕೃತಿ ಅವರ ಕೀರ್ತನೆಗಳ ಪೂರ್ಣ ಮಾಹಿತಿಯನ್ನು ಹೊದಗಿಸುತ್ತದೆ.

About the Author

ಕೃಷ್ಣ ಕೊಲ್ಹಾರ ಕುಲಕರ್ಣಿ
(16 October 1940)

ಕೇಂದ್ರ ಸರ್ಕಾರದ ಪ್ರಸಾರ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ಡಾ. ಕೃಷ್ಣಕೊಲ್ಲಾರ ಕುಲಕರ್ಣಿ ಅವರು ಇತಿಹಾಸ-ಸಂಶೋಧನೆಗಳಲ್ಲಿ ವಿಶೇಷ ಆಸಕ್ತಿ ಉಳ್ಳವರು. ಬಿಜಾಪುರ ಜಿಲ್ಲೆಯ ಕೋಲ್ಹಾರದವರಾದ ಅವರು ಕಾದಂಬರಿ, ನಾಟಕ ಜೀವನ ಚಿತ್ರಗಳನ್ನು ಪ್ರಕಟಿಸಿದ್ದಾರೆ. ಆದಿಲ್‌ ಷಾಹಿ ಕಾಲದ ಪಠ್ಯಗಳ ಕನ್ನಡ ಅನುವಾದ ಯೋಜನೆಯ ಸಂಪಾದಕರಾಗಿದ್ದರು. ಸಿಂದಗಿಯ ಬಿಂದಗಿ, ಕರ್ನಾಟಕ ವೈಭವ ವಾರಪತ್ರಿಕೆ, ಮಾಧ್ವಮಠಗಳು, ಆದಿಲ್‌ಶಾಹಿ ಆಸ್ಥಾನದ ಸಾಹಿತ್ಯ (ಸಂಶೋಧನೆ), ಮಹಿಮಾಪತಿರಾಯರ ಕೀರ್ತನೆಗಳು, ಕೃಷ್ಣದಾಸರ ಕೀರ್ತನೆಗಳು, ತಿಂಮಾಯಣ, ಶ್ರೀಸತ್ಯಧ್ಯಾನದರ್ಶನ (ಸಂಪಾದನೆ), ರತ್ನಾಕರ, ಮನೆ ಮುಳುಗಿತು (ಕಾದಂಬರಿ), ದಾಸ ಮಹಿಪತಿ, ದಾಸ ಜಗನ್ನಾಥ, ಮನುಕುಲ ಒಂದೇ (ನಾಟಕಗಳು), ಜ್ಞಾನಾರ್ಜನೆ (ಸಣ್ಣ ಕಥೆ) ಪ್ರಕಟಿತ ಕೃತಿಗಳು. ಅವರು ಗಮಕ ಕಲಾ ಪರಿಷತ್ತಿಗೆ ಅಧ್ಯಕ್ಷರಾಗಿದ್ದರು (2006).  ...

READ MORE

Related Books