ಸಮಗ್ರ ದಾಸ ಸಾಹಿತ್ಯ ಸಂಪುಟ- 2

Author : ಟಿ.ಎನ್. ನಾಗರತ್ನ

Pages 746

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು- 560002

Synopsys

ಡಾ.ಟಿ.ಎನ್. ನಾಗರತ್ನ ಸಂಪಾದಿಸಿರುವ ‘ಸಮಗ್ರ ದಾಸ ಸಾಹಿತ್ಯ ಸಂಪುಟ- 2’ ಕೃತಿಯಲ್ಲಿ ಶ್ರೀವಾದಿರಾಜರ ಕೀರ್ತನೆಗಳು ಮತ್ತು ಅವುಗಳ ಅರ್ಥ ವಿವರಗಳಿವೆ. ಕೃತಿಯಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯ ಕುರಿತು, ಪ್ರಕಾಶಕರ ಮಾತು, ಸಂಪಾದಕ ಮಂಡಳಿಯ ನುಡಿ, ಪ್ರಸ್ತಾವನೆಯನ್ನು ಒಳಗೊಂಡಂತೆ ಕೀರ್ತನೆಗಳ ಕ್ರಮಸೂಚಿ, ಶ್ರೀವಾದಿರಾಜರ ಕೀರ್ತನೆಗಳು, ಅನುಬಂಧಗಳು- ಕಠಿಣಶಬ್ದಗಳ ಅರ್ಥ, ಪೂರ್ವ ಕಥೆಗಳು ಮತ್ತು ಲಘು ಟಿಪ್ಪಣಿಗಳು, ಅಂಕಿತನಾಮಸೂಚಿ, ಕೀರ್ತನೆಗಳ ಆಕಾರಾದಿಸೂಚಿ, ಹಾಗೂ ಸಹಾಯಕ ಸಾಹಿತ್ಯ ಎಂಬ ಲೇಖನಗಳು ಸಂಕಲನಗೊಂಡಿವೆ.

About the Author

ಟಿ.ಎನ್. ನಾಗರತ್ನ
(29 May 1945)

ಶ್ರೀಮತಿ ಡಾ. ಟಿ.ಎನ್.ನಾಗರತ್ನ ಇವರು ಹರಿದಾಸ ಸಾಹಿತ್ಯದಲ್ಲಿ ಮಹತ್ವದ ಹೆಸರು. 35 ವರ್ಷಗಳ ಕಾಲ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸಗಂಗೋತ್ರಿ ಮೈಸೂರಿನಲ್ಲಿ, ಸಂಶೋಧನ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಲವು ಕೀರ್ತನೆಗಳನ್ನು ರಚಿಸಿ ಜನಪ್ರಿಯರಾಗಿದ್ದಾರೆ. ನಾಗರತ್ನರವರು ಹುಟ್ಟಿದ್ದು ಮಧ್ಯಪ್ರದೇಶದ ಸಿಯೋನಿಯಲ್ಲಿ 1945 ಮೇ 29ರಂದು. 1965ರಲ್ಲಿ ಪ್ರಥಮದರ್ಜೆ, ಪ್ರಥಮ ಶ್ರೇಣಿಯಲ್ಲಿ ಚಿನ್ನದ ಪದಕದೊಡನೆ ಪಡೆದ ಬಿ.ಎ. ಪದವಿ. ನಂತರ ಮೈಸೂರಿನ ಮಾನಸಗಂಗೋತ್ರಿಯಲ್ಲಿ ಎಂ.ಎ. ಪದವಿ. ಇಲ್ಲೂ ಕೂಡ ಪ್ರಥಮ ಶ್ರೇಣಿಯಲ್ಲಿ ಚಿನ್ನದ ಪದಕದೊಡನೆ ಗಳಿಸಿದ ಪದವಿ. 1970ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಧ್ಯಾಪಕರಾಗಿ ...

READ MORE

Related Books