ಸಮಗ್ರ ದಾಸ ಸಾಹಿತ್ಯ ಸಂಪುಟ-24

Author : ಶ್ರೀನಿವಾಸ ಹಾವನೂರ

Pages 472

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 560002

Synopsys

‘ಸಮಗ್ರ ದಾಸ ಸಾಹಿತ್ಯ ಸಂಪುಟ-24’ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ದಾಸ ಸಾಹಿತ್ಯ ಮಾಲಿಕೆಯಲ್ಲಿ ಪ್ರಕಟವಾದ ಕೃತಿ. ಈ ಕೃತಿಯನ್ನು ದಿ.ಪ್ರೊ.ಎಂ. ರಾಜಗೋಪಾಲಾಚಾರ್ಯ ಹಾಗೂ ಲೇಖಕ ಡಾ.ಶ್ರೀನಿವಾಸ ಹಾವನೂರ ಅವರು ಸಂಪಾದಿಸಿದ್ದಾರೆ. ಇಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯನ್ನು ಕುರಿತು, ಪ್ರಕಾಶಕರ ಮಾತು, ಸಂಪಾದಕ ಮಂಡಳಿಯ ನುಡಿ, ಪ್ರಸ್ತಾವನೆ, ಕೀರ್ತನೆಗಳ ಕ್ರಮಸೂಚಿ, ಕೀರ್ತನೆಗಳು- ಶ್ರೀ ವಿಶ್ವೇಂದ್ರತೀರ್ಥರ ಕೀರ್ತನೆಗಳು, ಶ್ರೀವರಾಹತಿಮ್ಮಪ್ಪ ಅವರ ರಚನೆಗಳು, ಶ್ರೀಸದಾನಂದರ ಕೀರ್ತನೆಗಳು, ಶ್ರೀ ಬೆಳ್ಳೆ ದಾಸಪ್ಪಯ್ಯರ ಪದಗಳು, ಶ್ರೀಗೋವಿಂದದಾಸರ ಕೃತಿಗಳು, ಅನ್ಯ ದಾಸರ ಬಿಡಿ ರಚನೆಗಳು ಸಂಕಲನಗೊಂಡಿದ್ದು, ಅನುಬಂಧದಲ್ಲಿ ಕಠಿಣ ಶಬ್ದಗಳ ಅರ್ಥ, ಟಿಪ್ಪಣಿಗಳು, ಅಂಕಿತನಾಮ ಸೂಚಿ, ವಿಶಿಷ್ಟ ಪದ ಸೂಚಿ, ಹಾಗೂ ಕೀರ್ತನೆಗಳ ಆಕಾರಾದಿ ಸೂಚಿ ಸಂಕಲನವಾಗಿವೆ.

About the Author

ಶ್ರೀನಿವಾಸ ಹಾವನೂರ

ಕನ್ನಡ ಸಾಹಿತ್ಯ ಇತಿಹಾಸ ಅಭ್ಯಸಿಸಲು ಮೊತ್ತಮೊದಲು ಕಂಪ್ಯೂಟರ್‌ನ್ನು ಬಳಿಸಿದವರು ಡಾ. ಶ್ರೀನಿವಾಸ ಹಾವನೂರ. ಕಂಪ್ಯೂಟರಿನ ಹಾಗೆ ಅವರು ಕನ್ನಡ ಸಾಹಿತ್ಯಕ್ಷೇತ್ರಕ್ಕೆ ಕೊಟ್ಟಿದ್ದು ವೈವಿಧ್ಯತೆಯು ಬೆಡಗು, ಕಾದಂ ಕಥನ ಎಂಬ ಹೊಸ ಸಾಹಿತ್ಯ ಪ್ರಕಾರವನ್ನೇ ಹುಟ್ಟು ಹಾಕಿರುವ ಅವರು ನಾಗರಿಕತೆ, ಇತಿಹಾಸ ಸಂಶೋಧನೆ, ಸಾಹಿತ್ಯ ವಿಶ್ಲೇಷಣೆ, ಲಲಿತಪ್ರಬಂಧ, ಜೀವನ ಚರಿತ್ರೆ ಮೊದಲಾದ ಪ್ರಕಾರಗಳಲ್ಲಿ 60ಕ್ಕೂ ಮಿಕ್ಕಿ ಕೃತಿಗಳನ್ನು ಹೊರತಂದವರು. ವಿದೇಶದಲ್ಲಿದ್ದ ಕನ್ನಡ ಸಾಹಿತ್ಯವನ್ನು ಮರಳಿ ತಾಯ್ತಾಡಿಗೆ ಕರೆತಂದರು. ಹೊಸಗನ್ನಡ ಅರುಣೋದಯದ ಸಾಹಿತ್ಯವನ್ನು ಮತ್ತೆ ತೆರೆದು ತೋರಿಸಿದರು, ಮುಂಬಯಿಯ ಹೋಮಿ, ಜೆ. ಬಾಬಾ ಅಣು ಸ್ಥಾವರ ಕೇಂದ್ರದ ಗ್ರಂಥಪಾಲಕರಾಗಿ ದುಡಿದ ...

READ MORE

Related Books