ಸಮಗ್ರ ದಾಸ ಸಾಹಿತ್ಯ ಸಂಪುಟ- 29-ಭಾಗ-2

Author : ಬಸವರಾಜ ಸಬರದ

Pages 253

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು- 560002

Synopsys

‘ಸಮಗ್ರ ದಾಸ ಸಾಹಿತ್ಯ ಸಂಪುಟ- 29-ಭಾಗ-2’ ಅಸ್ಗಿಹಾಳ ಗೋವಿಂದದಾಸರ ಹಾಗೂ ಕಾರ್ಪರ ನರಹರಿದಾಸರ ಕೀರ್ತನೆಗಳು ಈ ಕೃತಿಯನ್ನು ಲೇಖಕ ಡಾ. ಬಸವರಾಜ ಸಬರದ ಹಾಗೂ ಡಾ.ಜಯಲಕ್ಷ್ಮೀ ಮಂಗಳಮೂರ್ತಿ ಅವರು ಸಂಪಾದಿಸಿದ್ದಾರೆ. ಈ ಕೃತಿಯಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯನ್ನು ಕುರಿತು, ಪ್ರಕಾಶಕರ ಮಾತು, ಸಂಪಾದಕ ಮಂಡಲಿಯ ನುಡಿ, ಪ್ರಸ್ತಾವನೆಗಳೊಂದಿಗೆ ಕೀರ್ತನೆಗಳ ಕ್ರಮಸೂಚಿ, ಕೀರ್ತನೆಗಳು- ಅಸ್ಗಿಹಾಳ ಗೋವಿಂದದಾಸರು, ಕಾರ್ಪರ ನರಹರಿದಾಸರು ಮಾಹಿತಿಗಳು ಸಂಕಲನಗೊಂಡಿದ್ದರೆ. ಅನುಬಂಧಗಳಲ್ಲಿ ಕಠಿಣಶಬ್ದಗಳ ಅರ್ಥ, ಪ್ರಾದೇಶಿಕ ಪದಸೂಚಿ, ವಿಶೇಷ ಟಿಪ್ಪಣಿಗಳು, ಕೀರ್ತನೆಗಳ ಆಕಾರಾದಿಗಳು ಸಂಕಲನಗೊಂಡಿವೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books