ಸಮಗ್ರ ದಾಸ ಸಾಹಿತ್ಯ ಸಂಪುಟ:3-ಭಾಗ 2

Author : ಶ್ರೀನಿವಾಸ ಹಾವನೂರ

Pages 430

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 560002

Synopsys

‘ಸಮಗ್ರ ದಾಸ ಸಾಹಿತ್ಯ ಸಂಪುಟ:3-ಭಾಗ 2’ ಪುರಂದರದಾಸರ ಕೀರ್ತನೆಗಳು ಭಾಗ-2 ಕೃತಿಯನ್ನು ಶ್ರೀನಿವಾಸ ಹಾವನೂರ ಅವರು ಸಂಪಾದಿಸಿದ್ದಾರೆ. ದಾಸರೆಂದರೆ ಪುರಂದರದಾಸರಯ್ಯ ಎಂದು ಗುರುಗಳಾದ ವ್ಯಾಸರಾಯರಿಂದ ಪ್ರಶಂಸೆಗೆ ಪಾತ್ರವಾಗಿರುವ ಪುರಂದರದಾಸರು ಕನ್ನಡ ಸಾಹಿತ್ಯಕ್ಕೆ, ಕರ್ನಾಟಕ ಸಂಗೀತಕ್ಕೆ ನೀಡಿದ ಕೊಡುಗೆ ಇಂದಿಗೂ ಹಸಿರಾಗಿದೆ. ಬಹುಮುಖ ವ್ಯಕ್ತಿತ್ವವನ್ನು ಹೊಂದಿದ್ದ ಪುರಂದರದಾಸರು ಭಾರತೀಯ ಸಂಸ್ಕೃತಿಕ ಅತ್ಯಮೂಲ್ಯವಾದ ಕೊಡುಗೆಯನ್ನು ನೀಡಿದ ಮಹತ್ವದ ಸಾಧಕರಲ್ಲೊಬ್ಬರಾಗಿದ್ದಾರೆ. ಈ ಕೃತಿಯಲ್ಲಿ ಪುರಂದರ ದಾಸರ ಬದುಕು ಹಾಗೂ ಕೀರ್ತನೆಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಇಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯ ಕುರಿತು, ಪ್ರಕಾಶಕರ ಮಾತು, ಸಂಪಾದಕ ಮಂಡಳಿಯ ನುಡಿ, ಪ್ರಸ್ತಾವನೆ, ಕೀರ್ತನೆಗಳ ಕ್ರಮಸೂಚಿ, ಪುರಂದರದಾಸರ ಕೀರ್ತನೆಗಳು- ಪುರಾಣ ಕಥಾನಕಗಳು, ತತ್ತ್ವ ವಿವೇಚನೆ, ಲೋಕನೀತಿ, ಸಂಪ್ರದಾಯದ ಹಾಡುಗಳು, ವಿಶೇಷ ಹಾಗೂ ಅನುಬಂಧಗಳಲ್ಲಿ ಕಠಿಣಶಬ್ದಗಳ ಅರ್ಥ, ಪಾರಿಭಾಷಿಕ ಪದಗಳ ಅರ್ಥ, ಪೂರ್ವ ಕಥೆಗಳು- ಟಿಪ್ಪಣಿಗಳು, ಕೀರ್ತನೆಗಳ ಆಕಾರಾದಿ, ಸಹಾಯಕ ಸಾಹಿತ್ಯ ಸಂಕಲನಗೊಂಡಿವೆ.

About the Author

ಶ್ರೀನಿವಾಸ ಹಾವನೂರ

ಕನ್ನಡ ಸಾಹಿತ್ಯ ಇತಿಹಾಸ ಅಭ್ಯಸಿಸಲು ಮೊತ್ತಮೊದಲು ಕಂಪ್ಯೂಟರ್‌ನ್ನು ಬಳಿಸಿದವರು ಡಾ. ಶ್ರೀನಿವಾಸ ಹಾವನೂರ. ಕಂಪ್ಯೂಟರಿನ ಹಾಗೆ ಅವರು ಕನ್ನಡ ಸಾಹಿತ್ಯಕ್ಷೇತ್ರಕ್ಕೆ ಕೊಟ್ಟಿದ್ದು ವೈವಿಧ್ಯತೆಯು ಬೆಡಗು, ಕಾದಂ ಕಥನ ಎಂಬ ಹೊಸ ಸಾಹಿತ್ಯ ಪ್ರಕಾರವನ್ನೇ ಹುಟ್ಟು ಹಾಕಿರುವ ಅವರು ನಾಗರಿಕತೆ, ಇತಿಹಾಸ ಸಂಶೋಧನೆ, ಸಾಹಿತ್ಯ ವಿಶ್ಲೇಷಣೆ, ಲಲಿತಪ್ರಬಂಧ, ಜೀವನ ಚರಿತ್ರೆ ಮೊದಲಾದ ಪ್ರಕಾರಗಳಲ್ಲಿ 60ಕ್ಕೂ ಮಿಕ್ಕಿ ಕೃತಿಗಳನ್ನು ಹೊರತಂದವರು. ವಿದೇಶದಲ್ಲಿದ್ದ ಕನ್ನಡ ಸಾಹಿತ್ಯವನ್ನು ಮರಳಿ ತಾಯ್ತಾಡಿಗೆ ಕರೆತಂದರು. ಹೊಸಗನ್ನಡ ಅರುಣೋದಯದ ಸಾಹಿತ್ಯವನ್ನು ಮತ್ತೆ ತೆರೆದು ತೋರಿಸಿದರು, ಮುಂಬಯಿಯ ಹೋಮಿ, ಜೆ. ಬಾಬಾ ಅಣು ಸ್ಥಾವರ ಕೇಂದ್ರದ ಗ್ರಂಥಪಾಲಕರಾಗಿ ದುಡಿದ ...

READ MORE

Related Books