ಸಮಗ್ರ ದಾಸ ಸಾಹಿತ್ಯ ಸಂಪುಟ: 9-ಭಾಗ 2

Author : ಜಿ. ಅಶ್ವತ್ಥನಾರಾಯಣ

Pages 485

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು- 560002

Synopsys

‘ಸಮಗ್ರ ದಾಸ ಸಾಹಿತ್ಯ ಸಂಪುಟ: 9-ಭಾಗ 2’ ಶ್ರೀವಿಜಯದಾಸರ ಕೀರ್ತನೆಗಳು ಹಾಗು ಉಗಾಭೋಗಗಳು ಕೃತಿಯನ್ನು ಲೇಖಕ ಪ್ರೊ.ಜಿ. ಅಶ್ವತ್ಥನಾರಾಯಣ ಅವರು ಸಂಪಾದಿಸಿದ್ದಾರೆ. ಈ ಕೃತಿಯಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯ ಕುರಿತು, ಪ್ರಕಾಶಕರ ಮಾತು, ಸಂಪಾದಕರ ಮಂಡಳಿಯ ನುಡಿ, ಪ್ರಸ್ತಾವನೆ, ಕೀರ್ತನೆಗಳ ಕ್ರಮಸೂಚಿ(ಕೀ.ಮತ್ತು ಉ), ಶ್ರೀವಿಜಯದಾಸರ ಕೀರ್ತನೆಗಳು ಮತ್ತು ಉಗಾಭೋಗಗಳು, ಭಾಗ-2(310-540) (1-309ರವರೆಗಿನ ಕೀರ್ತನೆಗಳಿಗೆ ಭಾಗ-1ನೋಡಿ) ಕೀರ್ತನೆಗಳು, ಉಗಾಭೋಗಗಳು ಸಂಕಲನಗೊಂಡಿದ್ದು, ಅನುಬಂಧದಲ್ಲಿ ಕಠಿಣಶಬ್ದಗಳ ಅರ್ಥ, ಕಠಿಣಶಬ್ದಗಳ ಅರ್ಥ, ಟಿಪ್ಪಣಿಗಳು, ಟಿಪ್ಪಣಿಗಳು, ಅಂಕಿತನಾಮಸೂಚಿ, ಅಂಕಿತನಾಮಸೂಚಿ, ಕೀರ್ತನೆಗಳ ಆಕಾರಾದಿ, ಉಗಾಭೋಗಗಳ ಆಕಾರಾದಿ ಮತ್ತು ಸಾಹಯಕ ಸಾಹಿತ್ಯ (ಕೀರ್ತನೆಗಳು ಮತ್ತು ಉಗಾಭೋಗಗಳು) ಸಂಕಲನಗೊಂಡಿವೆ.

About the Author

ಜಿ. ಅಶ್ವತ್ಥನಾರಾಯಣ
(12 May 1938)

ಸಂಶೋಧಕರು, ಸಾಹಿತಿ, ಭಾಷಾ ತಜ್ಞ, ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಜಿ. ಅಶ್ವತ್ಥನಾರಾಯಣ ಅವರು 1938 ಮೇ 12 ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎಚ್.ಗುಂಡಪ್ಪ, ತಾಯಿ ಜಾನಕಮ್ಮ. ಸಮಾಜಶಾಸ್ತ್ರ ಮತ್ತು ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಪುರುಷೋತ್ತಮ ದಾಸರ ಸಮಗ್ರ ಕೃತಿಗಳು, ವಿಜಯ ದಾಸರ ಸಮಗ್ರ ಕೀರ್ತನೆಗಳು, ರತ್ನಾಕರವರ್ಣಿಯ ಶತಕತ್ರಯ, ಜ್ಞಾನವಂತರಾಗಿ ಜಾಗರೂಕರಾಗಿರಿ, ಉತ್ತಮ ಕ್ಷಮಾಧರ್ಮ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ಕನ್ನಡ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ.  ...

READ MORE

Related Books