ಸಮಾಜ-ಚಿಕಿತ್ಸಕ ಅಂಬೇಡ್ಕರ್

Author : ಎಸ್‌.ಆರ್‌. ರಾಮಸ್ವಾಮಿ

Pages 120

₹ 55.00




Year of Publication: 1990
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.
Phone: 9945036300

Synopsys

`ಸಮಾಜ-ಚಿಕಿತ್ಸಕ ಅಂಬೇಡ್ಕರ್' ಎಂಬುದು ವ್ಯಕ್ತಿ ಚಿತ್ರಣದ ಕೃತಿ. ಲೇಖಕ ಎಸ್.‌ ಆರ್.‌ ರಾಮಸ್ವಾಮಿ ಮತ್ತು ಚಂದ್ರಶೇಖರ ಭಂಡಾರಿ ಅವರು ರಚಿಸಿದ್ದಾರೆ. ರಾಷ್ಟ್ರನಾಯಕ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ವಿಚಾರ ಕುರಿತ ಪರಿಚಯ ಡಾ. ಬಿ. ಆರ್. ಅಂಬೇಡ್ಕರ್ ಜೊತೆಗೆ ಅವರ ನಿಕಟವರ್ತಿಯಾಗಿ ಹಲವು ವರ್ಷ ಅವರೊಂದಿಗೆ ಕೆಲಸ ಮಾಡಿದ ಶ್ರೀ ದತ್ತೋಪಂತ ಠೇಂಗಡಿಯವರ ಸುದೀರ್ಘ ಪ್ರಸ್ತಾವನೆಯೂ ಸೇರಿದೆ. ಬಾಬಾ ಸಾಹೇಬರ ಜನ್ಮಶತಾಬ್ದಿ ಸಂದರ್ಭದ ಸ್ಮರಣಿಕೆಯಾಗಿ ಈ ಪುಸ್ತಕವನ್ನು ಹೊರತರಲಾಗಿದೆ. 

About the Author

ಎಸ್‌.ಆರ್‌. ರಾಮಸ್ವಾಮಿ

ನಾಡೋಜ ಎಸ್‌.ಆರ್‌.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ...

READ MORE

Related Books