ಸಮಾಜವಾದಿ ಹೋರಾಟಗಾರರ ಸಂದರ್ಶನ-ಸಂಪುಟ-1

Author : ಬಿ. ಪೀರ್ ಬಾಷ

Pages 326

₹ 120.00




Year of Publication: 2007
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ, ವಿದ್ಯಾರಣ್ಯ- 583276

Synopsys

‘ಸಮಾಜವಾದಿ ಹೋರಾಟಗಾರರ ಸಂದರ್ಶನ’ ಲೇಖಕ ಪೀರ್ ಬಾಷ ಅವರು ಸಂಪಾದಿಸಿರುವ ಸಂದರ್ಶನಗಳ ಸಂಕಲನ. ಕನ್ನಡ ಸಾಹಿತ್ಯದ ಮೇಲೆ ಲೋಹಿಯಾರ ಪ್ರಭಾವ ಅಪಾರ. ಒಂದು ತಲೆಮಾರಿನ ಕನ್ನಡದ ಅತ್ಯಂತ ಪ್ರತಿಭಾವಂತ ಲೇಖಕರು ಲೋಹಿಯಾರಿಂದ ಪ್ರಭಾವಿತರಾಗಿದ್ದಾರೆ.

ಯು.ಆರ್. ಅನಂತಮೂರ್ತಿ, ಪಿ.ಲಂಕೇಶ್, ಪೂರ್ಣಚಂದ್ರ ತೇಜಸ್ವಿ, ಕೆ.ವಿ. ಸುಬ್ಬಣ್ಣ, ಚಂದ್ರಶೇಖರ ಪಾಟೀಲ್ ಮುಂತಾದ ಹಿರಿಯ ಲೇಖಕರು ಲೋಹಿಯಾ ಚಿಂತನೆಗಳನ್ನು ಕರ್ನಾಟಕದಲ್ಲಿ ಸೃಜನಶೀಲವಾಗಿ ವಿಸ್ತರಿಸಿದರು. ಕರ್ನಾಟಕದ ಅಧಿಕಾರ ರಾಜಕಾರಣ, ಚಳವಳಿ ರಾಜಕಾರಣ, ಸಾಹಿತ್ಯ ಮತ್ತು ಸಂಸ್ಕೃತಿ ಚಿಂತನೆಯ ಮೇಲೆ ಲೋಹಿಯಾರ ಪ್ರಭಾವ ಇಂದಿಗೂ ಇದೆ, ಭಾರತದ ಅಗ್ರಗಣ್ಯ ಚಿಂತಕನಿಂದ ಪ್ರಭಾವಿತರಾದ ಕರ್ನಾಟಕದ ಒಂಬತ್ತು ಜನ ಸಮಾಜವಾದಿಗಳನ್ನು ಸಂದರ್ಶಿಸಿ, ಈ ಸಂಪುಟವನ್ನು ರೂಪಿಸಲಾಗಿದೆ. ಕರ್ನಾಟಕದ ಸಾಂಸ್ಕೃತಿಕ ಮತ್ತು ರಾಜಕೀಯ ಚರಿತ್ರೆ ಈ ಸಂದರ್ಶನಗಳಲ್ಲಿ ದಾಖಲಾಗಿದೆ.

About the Author

ಬಿ. ಪೀರ್ ಬಾಷ
(01 May 1972)

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿ ಬಿ. ಪೀರ್ ಬಾಷ ಅವರು ಹುಟ್ಟಿದ್ದು 1972 ರ ಮೇ 1 ರಂದು. ತಂದೆ-  ಬಿ.ಬಾಷಾ ಸಾಹೇಬ್ ಹಾಗೂ ತಾಯಿ- ಹಯಾತ್ ಬಿ. ಸದ್ಯ ಕೊಪ್ಪಳ ಜಿಲ್ಲೆಯ ಗಂಗಾವತಿಯ ಕಾರಟಗಿಯಲ್ಲಿ ವಾಸ. ಸಾಮಾಜಿಕ ಚಟುವಟಿಕೆಯೊಂದಿಗೆ ಬರವಣಿಗೆ ರೂಢಿಸಿಕೊಂಡಿರುವ ಪೀರ್ ಬಾಷ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಸದಸ್ಯರು. ಕವನ ಸಂಕಲನಗಳು : ಜೀವ ಬಂತು ಹಾದಿಗೆ, ಜಾಲಿ ಹೂಗಳ ನಡುವೆ,  ಅಕ್ಕಸೀತಾ ನಿನ್ನಂತೆ ನಾನೂ, ದೇವರು ಮನುಷ್ಯರಾದ ದಿನ, ಸಮಾಜವಾದಿ ಹೋರಾಟಗಾರರ ಸಂದರ್ಶನ ಮಾಡಿದ ಕೃತಿಗಳನ್ನು ಹಂಪಿಯ ಕನ್ನಡ ವಿ.ವಿ.ಪ್ರಕಟಿಸಿದೆ. ಸಮಾಜವಾದಿ ನೀಲಗಂಗಯ್ಯ ಪೂಜಾರ್ ಕುರಿತು ವ್ಯಕ್ತಿ ಚಿತ್ರಣ, ಸಂಪಾದಿತ ಕೃತಿ: ಶಿಲವೇರಿ ಶಿವಪ್ಪ ಸಂ (ತತ್ವಪದಗಳು), ...

READ MORE

Related Books