ಸಂಪೂರ್ಣ ವಾಲ್ಮೀಕಿ ರಾಮಾಯಣ

Author : ದೇವುಡು ನರಸಿಂಹಶಾಸ್ತ್ರಿಗಳು

Pages 144

₹ 170.00




Year of Publication: 2018
Published by: ಸಾಹಿತ್ಯ ನಂದನ ಪ್ರಕಾಶನ
Address: # ನಂ 9, 4ನೇ ಇ ಬ್ಲಾಕ್ ರಾಜಾಜಿನಗರ ಬೆಂಗಳೂರು

Synopsys

ಹಿರಿಯ ಲೇಖಕ-ಸಾಹಿತಿ ದೇವುಡು ನಸಿಂಹಶಾಸ್ತ್ರಿಗಳು ಬರೆದ ಕೃತಿ-ಸಂಪೂರ್ಣ ವಾಲ್ಮೀಕಿ ರಾಮಾಯಣ. ಈವರೆಗೂ ವಿವಿಧ ತೆರನಾದ ರಾಮಾಯಣಗಳು ಪ್ರಕಟಗೊಂಡಿವೆ.  ಕೆಲವೆಡೆ, ಪಾತ್ರಕ್ಕೆ, ಕೆಲವೆಡೆ ಘಟನೆ-ಸನ್ನಿವೇಶಕ್ಕೆ ಮಹತ್ವ ನೀಡಿದ್ದರಿಂದ ರಾಮಾಯಣವು ಮೂಲ ಕಥೆಗಿಂತ ಭಿನ್ನವಾಗಿ ಕಂಡರೂ ಮೂಲ ಸ್ವರೂಪವನ್ನು ಕಳೆದುಕೊಂಡಿಲ್ಲ ಎಂಬುದು ಗಮನಾರ್ಹ. ಅದೇ ರೀತಿ, ದೇವುಡು ನರಸಿಂಹಶಾಸ್ತ್ರಿಗಳೂ ಸಹ ತೀರಾ ಸರಳ ಭಾಷೆಯಲ್ಲಿ ರಾಮಾಯಣವನ್ನು ವಿವರಿಸಿದ್ದು, ಈ ಕೃತಿಯ ವೈಶಿಷ್ಟ್ಯ.

About the Author

ದೇವುಡು ನರಸಿಂಹಶಾಸ್ತ್ರಿಗಳು
(29 December 1886 - 27 October 1962)

’ಮಹಾಕಾದಂಬರಿಕಾರ’ ಎಂದು ಹೆಸರುವಾಸಿಯಾಗಿದ್ದ ದೇವುಡು ನರಸಿಂಹಶಾಸ್ತ್ರಿಗಳು ಶಿಕ್ಷಕರಾಗಿ, ಸಂಪಾದಕರಾಗಿ, ನಟರಾಗಿ, ವಿಮರ್ಶಕರಾಗಿ ತಮ್ಮ ಪ್ರತಿಭೆ- ಪಾಂಡಿತ್ಯ ಮೆರೆದಿದ್ದರು. ನರಸಿಂಹ ಶಾಸ್ತ್ರಿಗಳು ಜನಿಸಿದ್ದು ಮೈಸೂರಿನ ರಾಜಪುರೋಹಿತರ ಮನೆತನದಲ್ಲಿ.  1896ರ ಡಿಸೆಂಬರ್‌ 26ರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡರು. ತಾಯಿಯ ಆಸರೆಯಲ್ಲಿ ಬೆಳೆದ ನರಸಿಂಹಶಾಸ್ತ್ರಿಗಳು ತೀಕ್ಷ್ಣ ಬುದ್ಧಿಯುಳ್ಳವರಾಗಿದ್ದರು. ಹನ್ನೆರಡನೆಯ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದಂತಹ ಕಾವ್ಯ ಮತ್ತುಭಾಗವತದಂತಹ ಪುರಾಣಗಳನ್ನು ಓದಿ ಅರಿತಿದ್ದರು. ಹದಿನೈದನೆಯ ವಯಸ್ಸಿನಲ್ಲಿಯೇ ಛಂದೋಬದ್ಧವಾಗಿ ಕಾವ್ಯ ರಚಿಸುವ ಹವ್ಯಾಸ ಬೆಳೆಸಿಕೊಂಡರು. ಸಾಂಪ್ರದಾಯಿಕ ವೈದಿಕ ವಿದ್ಯೆಯ ಜೊತೆಯಲ್ಲಿಯೇ ಬಿ.ಎ., ಎಂ.ಎ. ಪದವಿಯನ್ನು ಸಂಸ್ಕೃತ ಹಾಗೂ ಭಾರತೀಯ ತತ್ವಶಾಸ್ತ್ರದಲ್ಲಿ ಪಡೆದಿದ್ದರು. ಸರ್ವಪಲ್ಲಿ ...

READ MORE

Related Books