ಸಂರಚನವಾದಿ ವಿಮರ್ಶಾತ್ಮಕ ಶಿಕ್ಷಣ

Author : ಮಹಾಬಲೇಶ್ವರ ರಾವ್

Pages 72

₹ 50.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಶಿವಾನಂದ ಸರ್ಕಲ್ ಹತ್ತಿರ, ಬೆಂಗಳೂರು
Phone: 08022161900

Synopsys

ಬೋಧನೆ ಕಲಿಕೆಯ ವಿಷಯದಲ್ಲಿ ವರ್ತನವಾದದ ಪ್ರಭಾವದಿಂದ ಬಿಡಿಸಿಕೊಂಡು ಸಂರಚನವಾದ ಹಾಗೂ ವಿಮರ್ಶಾತ್ಮಕ ಭೋಧನೆಯ ಪರಿಕಲ್ಪನೆಗಳನ್ನು ವಿಶೇಷವಾಗಿ ಪ್ರೋತ್ಸಾಹಿಸಿರುವುದು ಸಹಜವೇ ಆಗಿದೆ. ಆದರೆ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಈ ಬಗ್ಗೆ ಯಾವ ಜ್ಞಾನವೂ ಇಲ್ಲ. ಶಿಕ್ಷಣ ಇಲಾಖೆಗಳು ತಡವಾಗಿ ಅಲ್ಲಲ್ಲಿ ಚದುರಿದ ಹಾಗೆ ಈ ವಿಚಾರಗಳ ಬಗ್ಗೆ ಸೇವಾಂತರ್ಗತ ಕಾರ್ಯಾಗಾರಗಳನ್ನು ನಡೆಸುತ್ತಿವೆ. ಪ್ರಗತಿಪರವಾದ ಈ ಎರಡು ಪರಿಕಲ್ಪನೆಗಳಿಗೆ ವ್ಯಾಪಕ ಪ್ರಚಾರ ಲಭ್ಯವಾಗಬೇಕಲ್ಲದೆ ತೃಣಮೂಲದ ಶಿಕ್ಷಕರು ಸಬಲರಾಗುವ ಅಗತ್ಯವಿದೆ. ಆದುದರಿಂದಲೆ "ಸಂರಚನವಾದಿ ವಿಮರ್ಶಾತ್ಮಕ ಶಿಕ್ಷಣ" ಎಂಬ ಈ ಕೃತಿಯನ್ನು ರಚಿಸಿದ್ದೇನೆ ಎನ್ನುತ್ತಾರೆ ಲೇಖಕ ಮಹಾಬಲೇಶ್ವರ ರಾವ್. ಪರಿಕಲ್ಪನೆಗಳನ್ನು ಆಶಯಗಳನ್ನು ದುರ್ಬಲಗೊಳಿಸದೆ ಸರಳವಾಗಿ ನಿರೂಪಿಸುವ ಪ್ರಯತ್ನವಾಗಿದೆ. ಶಾಲಾ ಶಿಕ್ಷಕರ ತರಗತಿಯ ವ್ಯವಹಾರಗಳಿಗೆ ಇದೊಂದು ಉಪಯುಕ್ತವಾದ ಪುಸ್ತಕ.

About the Author

ಮಹಾಬಲೇಶ್ವರ ರಾವ್

ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್‌ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.  ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ.  ...

READ MORE

Related Books