ಸಂಶೋಧಕ ನಾ. ಶ್ರೀ ರಾಜಪುರೋಹಿತ

Author : ಕೃಷ್ಣ ಕೊಲ್ಹಾರ ಕುಲಕರ್ಣಿ

Pages 144

₹ 60.00




Year of Publication: 2003
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಕಳೆದ ಶತಮಾನದ ಪೂರ್ವಾರ್ಧದಲ್ಲಿ ಕನ್ನಡ ನಾಡು ನುಡಿ, ಚರಿತ್ರೆಗಳನ್ನು ಪ್ರಥಮ ಬಾರಿಗೆ ಕನ್ನಡಿಗರೆದುರಿಗಿಟ್ಟು ಕನ್ನಡಿಗರನ್ನು ಎಚ್ಚರಗೊಳಿಸಿದ ನಾಡಿನ ಖ್ಯಾತ ಇತಿಹಾಸ ಸಂಶೋಧಕ ನಾ. ಶ್ರೀ ರಾಜಪುರೋಹಿತರ ಬದುಕು ಸಾಧನೆಯನ್ನು ಈ ಕೃತಿಯಲ್ಲಿ ಹಿಡಿದಿಡಲಾಗಿದೆ. ಈ ಕೃತಿಯು ಒಳಗೊಂಡಿರುವ ಭಾಗಗಳೆಂದರೆ:ಯಾರು ಈ ರಾಜಪುರೋಹಿತರು ,ಧಾರವಾಡದಲ್ಲಿ ಸಂಸಾರ ,ನಾಡು ಗುರುತಿಸಿದ ರಾಜ ಪುರೋಹಿತ ,ಅಧ್ಯಾತ್ಮ ಸಾಧನೆ: ಕೃತಿಗಳು ,ಸಂಶೋಧನ; ಸಂಶೋಧನಾ ಲೇಖನಗಳು ,ಹಿರಿಯರು ಕಂಡು ರಾಜಪುರೋಹಿತರು.

About the Author

ಕೃಷ್ಣ ಕೊಲ್ಹಾರ ಕುಲಕರ್ಣಿ
(16 October 1940)

ಕೇಂದ್ರ ಸರ್ಕಾರದ ಪ್ರಸಾರ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ಡಾ. ಕೃಷ್ಣಕೊಲ್ಲಾರ ಕುಲಕರ್ಣಿ ಅವರು ಇತಿಹಾಸ-ಸಂಶೋಧನೆಗಳಲ್ಲಿ ವಿಶೇಷ ಆಸಕ್ತಿ ಉಳ್ಳವರು. ಬಿಜಾಪುರ ಜಿಲ್ಲೆಯ ಕೋಲ್ಹಾರದವರಾದ ಅವರು ಕಾದಂಬರಿ, ನಾಟಕ ಜೀವನ ಚಿತ್ರಗಳನ್ನು ಪ್ರಕಟಿಸಿದ್ದಾರೆ. ಆದಿಲ್‌ ಷಾಹಿ ಕಾಲದ ಪಠ್ಯಗಳ ಕನ್ನಡ ಅನುವಾದ ಯೋಜನೆಯ ಸಂಪಾದಕರಾಗಿದ್ದರು. ಸಿಂದಗಿಯ ಬಿಂದಗಿ, ಕರ್ನಾಟಕ ವೈಭವ ವಾರಪತ್ರಿಕೆ, ಮಾಧ್ವಮಠಗಳು, ಆದಿಲ್‌ಶಾಹಿ ಆಸ್ಥಾನದ ಸಾಹಿತ್ಯ (ಸಂಶೋಧನೆ), ಮಹಿಮಾಪತಿರಾಯರ ಕೀರ್ತನೆಗಳು, ಕೃಷ್ಣದಾಸರ ಕೀರ್ತನೆಗಳು, ತಿಂಮಾಯಣ, ಶ್ರೀಸತ್ಯಧ್ಯಾನದರ್ಶನ (ಸಂಪಾದನೆ), ರತ್ನಾಕರ, ಮನೆ ಮುಳುಗಿತು (ಕಾದಂಬರಿ), ದಾಸ ಮಹಿಪತಿ, ದಾಸ ಜಗನ್ನಾಥ, ಮನುಕುಲ ಒಂದೇ (ನಾಟಕಗಳು), ಜ್ಞಾನಾರ್ಜನೆ (ಸಣ್ಣ ಕಥೆ) ಪ್ರಕಟಿತ ಕೃತಿಗಳು. ಅವರು ಗಮಕ ಕಲಾ ಪರಿಷತ್ತಿಗೆ ಅಧ್ಯಕ್ಷರಾಗಿದ್ದರು (2006).  ...

READ MORE

Related Books