ಸಂಸ್ಕೃತಿ: ಶ್ರಮ ಮತ್ತು ಸೃಜನಶೀಲತೆ

Author : ಬರಗೂರು ರಾಮಚಂದ್ರಪ್ಪ

Pages 584

₹ 350.00




Year of Publication: 2001
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಕೃತಿ ಸಂಸ್ಕೃತಿ: ಶ್ರಮ ಮತ್ತು ಸೃಜನಶೀಲತೆ. "ಬೆವರು ಮನುಷ್ಯ ಸಮಾಜದ ಮೂಲ; ಕತ್ತಲಿಂದ ಬೆಳಕಿಗೆ ಬೆಳಕಿನಿಂದ ಕತ್ತಲಿಗೆ ಸೇತುವೆ ಕಟ್ಟುತ್ತಾ ಬಂದ `ಬೆವರು' ನಮ್ಮ ನಡುವಿನ ಒಂದು ಚಾರಿತ್ರಿಕ ಪ್ರಕ್ರಿಯೆ. ಹಗಲಿರುಳೆನ್ನದೆ ನಿರಂತರ ಕ್ರಿಯಾಶೀಲತೆಯಲ್ಲಿ ಮಗ್ನವಾದ ಈ ಬೆವರು ಬೆಟ್ಟಗುಡ್ಡಗಳಲ್ಲಿ ಬದುಕನ್ನು ಹುಡುಕಿದೆ. ತನ್ನ ತೊಡಗುವಿಕೆಯ ಮೂಲಕ ಬುದ್ಧಿ-ಭಾವಗಳನ್ನು ಒಳಗೊಳ್ಳುತ್ತ ಸೃಜನಶೀಲ ನೆಲೆಗಳನ್ನು ನಿರ್ಮಾಣ ಮಾಡುತ್ತ ಬಂದಿದೆ. ಒಟ್ಟಾರೆ ಇದೊಂದು ಮನುಷ್ಯ ಚರಿತ್ರೆ, ಎಂದೂ ಬತ್ತದ ಅಕ್ಷಯಪಾತ್ರೆ. ಇದೇ ನನ್ನ ಭೂಮಿತತ್ವ - ಎನ್ನುವ ಬರಗೂರರ ಆಯ್ದ ವಿಚಾರ-ವಿಮರ್ಶಾ ಲೇಖನಗಳ ಸಂಕಲನ.

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books