ಸಂಗಡ

Author : ಎಚ್.ಎಸ್. ರಾಘವೇಂದ್ರರಾವ್

₹ 200.00




Published by: ಕನ್ನಡ ವೇದಿಕೆ
Address: ಜೈನ್ ವಿಶ್ವವಿದ್ಯಾಲಯ, ಬೆಂಗಳೂರು

Synopsys

‘ಸಂಗಡ’ ಕೃತಿಯು ಮೂವತ್ತೆಂಟು ಮುನ್ನುಡಿ ಮತ್ತು ಪ್ರಸ್ತಾವನೆಗಳ ಸಂಗ್ರಹವಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ : ಸಾಹಿತ್ಯ ಚರಿತ್ರೆಯ ಕೃತಕ ನಿರ್ಮಾಣಗಳಿಗಿಂತ ಭಿನ್ನವಾಗಿ ವಾಸ್ತವದ ಸಾಂಸ್ಕೃತಿಕ ಲೋಕದ ಸ್ವರೂಪ ಹೇಗಿದ್ದೀತೆಂಬ ಕುತೂಹಲದ ಹುಡುಕಾಟ `ಇಪ್ಪತ್ತನೆಯ ಶತಮಾನದ ಕಾವ್ಯ’ದ ಪ್ರಸ್ತಾವನೆಯಲ್ಲಿದೆ. ಭಾಷೆಯನ್ನು ಅವರು `ನಿತ್ಯಮದುವಣಗಿತ್ತಿ’ ಎಂದು ವರ್ಣಿಸುತ್ತಾರೆ .ಆಧುನಿಕಗೊಳ್ಳುವಾಗಲೂ ಸಾತತ್ಯವನ್ನು ಕಾಪಾಡಿಕೊಳ್ಳುವ ಯತ್ನದಲ್ಲಿ ಅಥವಾ ಸಾತತ್ಯ ಉಳಿಸಿಕೊಳ್ಳುತ್ತಲೇ ಆಧುನಿಕಗೊಳ್ಳುವ ತಹತಹದಲ್ಲಿ ಗಳಿಸಿದ್ದೆಷ್ಟು, ಕಳೆದದ್ದೆಷ್ಟು? ಅಕ್ಷರಲೋಕದ ಅಂಚಿನ ಸುಪ್ತ ಜಾನಪದದ ಲೋಕದರ್ಶನದಲ್ಲಿ ಒಟ್ಟು ಸಮುದಾಯದ ಅನುಭವದ ಎದೆಬಡಿತ ಕೇಳಬಹುದೆಂಬ ನಿರೀಕ್ಷೆ ಅವರದು. ಸಾಹಿತ್ಯ ಚರಿತ್ರೆಯ ರಚಿತ ಆಕೃತಿಗಿಂತ ಬೇರೆಯೇ ಆಗಿರಬಹುದಾದ ನಿಜ ಜೀವನದರ್ಶನವನ್ನು ಅನುಸಂಧಾನಗೈವ ಅಪೇಕ್ಷೆ ಇಲ್ಲಿಯ ಬರಹಗಳ ಹಿಂದಿದೆ.

 

About the Author

ಎಚ್.ಎಸ್. ರಾಘವೇಂದ್ರರಾವ್
(01 August 1948)

ಮೂಲತಃ ಚಿತ್ರದುರ್ಗದವರಾದ ರಾಘವೇಂದ್ರರಾವ್ ಅವರು (ಜನನ 1948) ಬೆಂಗಳೂರು ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದು ನಿವೃತ್ತರಾದವರು. ಕುವೆಂಪು, ಬೇಂದ್ರೆ, ಪು.ತಿ.ನ. ಅವರ ಕಾವ್ಯ ಕುರಿತು ಅಧ್ಯಯನ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ಕೆಲಕಾಲ ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ಹಂಪಿಯಲ್ಲಿ ಕರ್ನಾಟಕ ವಿಶ್ವಕೋಶದ ಸಂಪಾದಕರಾಗಿದ್ದ ರಾಘವೇಂದ್ರರಾವ್ ಅವರ ವಿಮರ್ಶಾ ಕೃತಿಗಳು ‘ವಿಶ್ಲೇಷಣೆ’, ‘ನಿಲುವು’, ‘ಹುಡುಕಾಟ’, ‘ಪ್ರಗತಿಶೀಲತೆ, ‘ಹಾಡೆ ಹಾದಿಯ ತೋರಿತು’. ‘ಬಾಲ ಮೇಧಾವಿ’ ಎಂಬ ಜರ್ಮನ್ ಕತೆಗಳ ಅನುವಾದ ಸಂಕಲನ ಹಾಗೂ ‘ಜನಗಣಮನ’ ಎಂಬ ಲವಲವಿಕೆಯ ಪ್ರವಾಸ ಕಥನ ಪ್ರಕಟಿಸಿದ್ದಾರೆ. ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರಾಗಿರುವ ...

READ MORE

Related Books