ಸಂಗೊಳ್ಳಿ ರಾಯಣ್ಣ ಮತ್ತು ಇತರ ನಾಟಕಗಳು

Author : ಬುದ್ದಣ್ಣ ಹಿಂಗಮಿರೆ

Pages 145

₹ 175.00




Year of Publication: 2007
Published by: ಯುಗಧ್ವನಿ ಪ್ರಕಾಶನ
Address: ಮಾಳಮಡ್ಡಿ, ಧಾರವಾಡ-580007

Synopsys

ಡಾ. ಬುದ್ದಣ್ಣ ಹಿಂಗಮಿರೆ ಅವರು ಬರೆದ ಕಿರು ನಾಟಕಗಳ ಸಂಕಲನ-ಸಂಗೊಳ್ಳಿ ರಾಯಣ್ಣ ಮತ್ತು ಇತರ ನಾಟಕಗಳು. ಈ ಸಂಕಲನದಲ್ಲಿ ಸಂಗೊಳ್ಳಿ ರಾಯಣ್ಣ, ಇಮ್ಮಡಿ ಪುಲಕೇಶಿ, ನೆನೆದವರ ಮನದಲ್ಲಿ, ಟಿಪ್ಪು, ಅಶೋಕ ಚಕ್ರ ಹಾಗೂ ಅಲೆಮಾರಿಗಳು-ಹೀಗೆ ಆರು ನಾಟಕಗಳು ಇಲ್ಲಿ ಸಂಕಲನಗೊಂಡಿವೆ. ಐತಿಹಾಸಿಕ -ಚಾರಿತ್ರಿಕ ಮಹತ್ವದ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಳ್ಳುವ ಎಚ್ಚರಿಕೆಯಲ್ಲಿ ಇಲ್ಲಿಯ ನಾಟಕಗಳು ಗಮನ ಸೆಳೆಯುತ್ತವೆ. 

 

About the Author

ಬುದ್ದಣ್ಣ ಹಿಂಗಮಿರೆ
(04 September 1933 - 17 August 2012)

ಕವಿ ಬುದ್ದಣ್ಣ ಹಿಂಗಮಿರೆ ಅವರು 1933 ಸೆಪ್ಟೆಂಬರ್ 4ರಂದು ಕೊಲ್ಹಾಪುರ ಜಿಲ್ಲೆಯ ರಾಜಾಪುರದಲ್ಲಿ ಜನಿಸಿದರು. ತಂದೆ ಬಾಬು, ತಾಯಿ ದುಂಡವ್ವ. ಬೆಳಗಾವಿಯ ಲಿಂಗರಾಜ ಕಾಲೇಜಿನಿಂದ ಬಿ.ಎ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ರಷ್ಯನ್ ಭಾಷೆಯಲ್ಲಿ ಎಂ.ಎ ಪದವಿ, ಪುಣೆ ವಿಶ್ವವಿದ್ಯಾಲಯದಿಂದ ಎಂ.ಎ ಹಾಗೂ ಪಿಎಚ್.ಡಿ. (ವಿಷಯ: ಕನ್ನಡದಲ್ಲಿ ಶೋಕ ಕಾವ್ಯ) ಪಡೆದರು.  ಅಥಣಿಯಲ್ಲಿ ಹೈಸ್ಕೂಲ್ ಶಿಕ್ಷಕರಾಗಿ, ನಿಪ್ಪಾಣಿಯ ಜಿ.ಐ. ಬಾಗೇವಾಡಿ ಕಾಲೇಜಿನಲ್ಲಿ ಹಾಗೂ ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜಿನಲ್ಲಿ ಮತ್ತು ಧಾರವಾಡದ ಕರ್ನಾಟಕ ಕಲಾ ವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ.  ಕೃತಿಗಳು: ಹುಲ್ಲುಗೆಜ್ಜೆ, ಶಬ್ದ ರಕ್ತ ಮತ್ತು ...

READ MORE

Related Books