ಸಂಕೀರ್ಣ-೧

Author : ಲತಾ ಗುತ್ತಿ

Pages 410

₹ 290.00




Year of Publication: 2013
Published by: ಪ್ರಸಾರಾಂಗ
Address: ಕರ್ನಾಡಕ ಮಹಿಳಾ ವಿಶ್ವವಿದ್ಯಾಲಯ, ಬಿಜಾಪುರ

Synopsys

ಮಹಿಳೆಯರಿಗೆ ಉನ್ನತ ಶಿಕ್ಷಣ ಮತ್ತು ತರಬೇತಿ ನೀಡುವ ಮೂಲಕ ಮಹಿಳಾ ಸಬಲೀಕರಣ ಸಾಧಿಸುವ ಉದ್ದೇಶದಿಂದ ೨೦೦೩ರಲ್ಲಿ ಆರಂಭವಾದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿದೆ. ಸಂಕೀರ್ಣ ಸಂಕಲನಗಳು ಯೋಜನೆಯಲ್ಲಿ ಮಹಿಳೆಯರ ಉತ್ತಮ ಅಭಿವ್ಯಕ್ತಿಗಳಾದ ಕಾವ್ಯ, ನಾಟಕ, ಸಣ್ಣಕತೆ, ವಿಮರ್ಶೆ, ಸಂಶೋಧನೆ ಮತ್ತು ಲಲಿತ ಪ್ರಬಂಧ ಎಂಬ ಆರು ಸಂಕಲಿತ ಕೃತಿಗಳನ್ನು ಹೊರತರಲಾಗಿದೆ. ಇದಲ್ಲದೆ ವಿಜಾಪುರದ ಸೂಫಿಸಂತರು ಹಾಗೂ ವಿಜಾಪುರದ ಕಲೆ ಮತ್ತು ವಾಸ್ತುಶಿಲ್ಪ ಎಂಬ ಎರಡು ಅನುವಾದಿತ ಕೃತಿಗಳು ಮತ್ತು ಮಹಿಳಾ ಪ್ರಚಲಿತ ವಿಷಯಗಳು ಹಾಗೆ ವಿವಿಧ ಲೇಖಕರಿಂದ ಮೂಡಿಬಂದ ಬರಹಗಳ ಸಂಕಲನ ಸಂಕಿರ್ಣ ಒಟ್ಟು ಹತ್ತು ಸಂಪುಟಗಳನ್ನು ಹೊರ ತಂದಿದ್ದಾರೆ.

About the Author

ಲತಾ ಗುತ್ತಿ
(12 August 1953)

ಮೂಲತಃ ಬೆಳಗಾವಿಯವರಾದ ಡಾ. ಲತಾ ಗುತ್ತಿ ಅವರು ತಮ್ಮ ಪ್ರವಾಸ ಕಥನ ಹಾಗೂ ಕವಿತೆಗಳ ಮೂಲಕ ಚಿರಪರಿಚಿತರಿದ್ದಾರೆ. ಲತಾ ಅವರು ಜನಿಸಿದ್ದು 1953ರ ಆಗಸ್ಟ್ 12ರಂದು. ಬೆಂಗಳೂರು ಕಂಪ್ಯೂಟರ್ ಟೆಕ್ನಾಲಜಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ತಂದೆ ನಾಗನಗೌಡ, ತಾಯಿ -ಶಾಂತಾದೇವಿ ಪಾಟೀಲ. ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಿಎಚ್.ಡಿ. ಪದವಿ ಪಡೆದಿರುವ ಅವರು ಮೈಸೂರು ವಿಶ್ವವಿದ್ಯಾಲಯಿಂದ ಇಂಗ್ಲಿಷಿನಲ್ಲಿ ಎಂ.ಎ. ಪದವಿ ಪಡೆದಿದ್ದಾರೆ.  ಯುರೋನಾಡಿನಲ್ಲಿ (1993), ನಾ ಕಂಡಂತೆ ಅರೇಬಿಯಾ (1995), ಅಂಡಮಾನಿನ ಎಳೆಯನು ಹಿಡಿದು (2013), ಚಿರಾಪುಂಜಿಯವರೆಗೆ (2017) ಅವರ ಪ್ರವಾಸ ಕಥನಗಳಾದರೆ ಹೆಜ್ಜೆ (2004), ಕರಿನೀರು (2015) ಕಾದಂಬರಿಗಳು.  “ಪ್ರವಾಸ ಸಾಹಿತ್ಯ ...

READ MORE

Related Books