ಸರಸ್ವತೀ ನದಿ

Author : ಟಿ. ಆರ್. ಅನಂತರಾಮು

Pages 104

₹ 80.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಕುಮಾರ ಕೃಪಾ ಪಶ್ಚಿಮಾ, ಶಿವಾನಂದ ಸರ್ಕಲ್‌ ಹತ್ತಿರ, ಬೆಂಗಳೂರು
Phone: 08022161900

Synopsys

ಹಲವಾರು ಭೌಗೋಳಿಕ ಮತ್ತು ಪ್ರಾಕೃತಿಕ ಕಾರಣಗಳಿಂದ ನದಿಗಳು ತಮ್ಮ ದಿಕ್ಕು ಬದಲಿಸಿವುದು, ಬತ್ತುವುದು ಸಾಮಾನ್ಯ. ಅದರಂತೆಯೇ ಅನೇಕರು ಗುಪ್ತಗಾಮಿನಿ ಎಂದು ನಂಬುವ ಸರಸ್ವತೀ ನದಿಯು ಹಿಮಾಲಯದ ಉತ್ಥಾನದೊಂದಿಗೆ ಬದುಕು ಸಾಗಿದುದರಿಂದ ಇದು ಅಚ್ಚರಿಯ ವಿಷಯವಲ್ಲ ಎಂಬುದನ್ನು ಹಾಗೂ ಇವುಗಳಿಗೆ ಭೂವೈಜ್ಞಾನಿಕ ದೃಷ್ಟಿಯಿಂದ ವಿಶ್ಲೇಷಣೆ ನೀಡಿದ್ದಾರೆ ಕೃತಿಕಾರರು. ವಿಜ್ಞಾನದಲ್ಲಿ ಆಸಕ್ತಿ ಉಳ್ಳವರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಓದಲೇಬೇಕಾದ ಹಲವು ವಿಶಿಷ್ಟ ಸಂಗತಿಗಳು ಇಲ್ಲುಂಟು.

About the Author

ಟಿ. ಆರ್. ಅನಂತರಾಮು
(03 August 1949)

ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ.  ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ.  ...

READ MORE

Related Books