ಸರ್‍ವಜ್ಞ ಮತ್ತು ಅಲ್ಲಮ ವಚನಗಳ ಓದು

Author : ಸಿ.ಪಿ. ನಾಗರಾಜ

Pages 228

₹ 200.00




Year of Publication: 2021
Published by: ನಾಗು ಸ್ಮಾರಕ ಪ್ರಕಾಶನ
Address: 75, ‘ಎ’ ಬ್ಲಾಕ್, 5ನೇಯ ಕ್ರಾಸ್, ಕ್ರಿಶ್ಣ ಗಾರ್ಡನ್. ಆರ್.ವಿ.ಕಾಲೇಜು ಪೋಸ್ಟ್, ಬೆಂಗಳೂರು - 560059
Phone: 9986347521

Synopsys

ಲೇಖಕ ಸಿ.ಪಿ.ನಾಗರಾಜ ಅವರ ಕೃತಿ ‘ಸರ್‍ವಜ್ಞ ಮತ್ತು ಅಲ್ಲಮ ವಚನಗಳ ಓದು’. ಈ ಮೊದಲು ಎರಡು ಚಿಕ್ಕ ಪುಸ್ತಕಗಳ ರೂಪದಲ್ಲಿ ಪ್ರಕಟವಾಗಿದ್ದ ಸರ್ವಜ್ಞ ಮತ್ತು ಅಲ್ಲಮ ವಚನಗಳನ್ನು ಜತೆಗೂಡಿಸಿ, ಈ ಕೃತಿಯನ್ನು ಹೊರತರಲಾಗಿದೆ. ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪನವರು 'ವಚನಕಾರರ ವಿಚಾರ ಕ್ರಾಂತಿ' ಎಂಬ ಬರಹದಲ್ಲಿ ಹೇಳಿರುವ ಕೆಲವು ನುಡಿಗಳನ್ನು ಮುನ್ನುಡಿಯ ರೂಪದಲ್ಲಿ ಬಳಸಿಕೊಳ್ಳಲಾಗಿದೆ. ಕೃತಿಯ ಪರಿವಿಡಿಯಲ್ಲಿ ಅಕ್ಕರವ ಕಲಿತಾತ ಒಕ್ಕಲನು ತಿನಕಲಿತ, ಅಡಿಗಳು ಏಳವು ನುಡಿಗಳು ತೋರಲು, ಅನ್ನ ದೇವರಿಗಿಂತ ಇನ್ನು ದೇವರು ಇಲ್ಲ, ಅನ್ನವನಿಕ್ಕುವುದು ಸನ್ನಿಯ ನುಡಿವುದು, ಆಡದೆ ಮಾಡುವವ ರೂಢಿಯೊಳಗುತ್ತಮನು, ಆರೈದು ನಡೆವವನು ಆರೈದು ನುಡಿವವನು, ಆಳಾಗ ಬಲ್ಲವನು ಆಳುವನು ಅರಸಾಗಿ, ಇಚ್ಛೆಯನರಿದಿತ್ತ ನುಚ್ಚೊಂದು ಮಾಣಿಕ್ಯ, ಇಟ್ಟಿಯಲಿ ಇರಿದೇರು ನೆಟ್ಟನೊಂದಾಗಿಕ್ಕು, ಒಡಲ ದಂಡಿಸಿ ಮುಕ್ತಿಪಡೆವೆನೆಂಬವನೆಗ್ಗ,ಒಲೆಗುಂಡನೊಬ್ಬನು ಮೆಲಬಹುದೆಂದರೆ ಇಂತಹ ತೊಂಭತ್ತು ವಚನಗಳ ಪದಗಳನ್ನು ಬಿಡಿಸಿ ಬರೆದು, ಪದಗಳ ತಿರುಳನ್ನು ತಿಳಿಸಿ, ವಚನದ ಸಾಲುಗಳ ಇಂಗಿತವನ್ನು ನಾಲ್ಕಾರು ವಾಕ್ಯಗಳಲ್ಲಿ ಬರೆಯಲಾಗಿದೆ.

About the Author

ಸಿ.ಪಿ. ನಾಗರಾಜ

ಬರಹಗಾರ ಸಿ.ಪಿ ನಾಗರಾಜು ಅವರು 1945ರಲ್ಲಿ ಪುಟ್ಟೇಗೌಡ-ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಜನಿಸಿದರು. ಎಂ.ಎ, ಪಿಎಚ್.ಡಿ ವ್ಯಾಸಂಗ ಮಾಡಿ ಸ್ತುತ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುದ್ರಿತ ನಾಟಕ ಕೃತಿಗಳು: ಭಾಗೀರಥಿ, ಅಂಬೆ, ಹಾವು, ಅಂಗಿಬಟ್ಟೆ, ಒಂದು ರೂಪಾಯಿ, ಕಳ್ಳರಿದ್ದಾರೆ ಎಚ್ಚರಿಕೆ, ಹೆಣದ ಹಣ, ಮೂರು ಸಾಮಾಜಿಕ ನಾಟಕಗಳು. ಮುದ್ರಿತ ಗದ್ಯ ಕೃತಿಗಳು: ಕರಿಯನ ಪುರಾಣ, ಕನಕನ ಅವ್ವ, ಹಳ್ಳಿಗಾಡಿನ ರೂವಾರಿ, ಡಾ.ಬಂದೀಗೌಡ, ಆಣೆ ಪ್ರಮಾಣಗಳು, ಬಯ್ಗುಳ, ಸರ್ವಜ್ಞ ವಚನಗಳ ಓದು, ಅಲ್ಲಮ ವಚನಗಳ ಓದು, ಶಿವಶರಣೆಯರ ವಚನಗಳ ಓದು, ಶಿವಶರಣರ ವಚನಗಳ ಓದು, ಬಸವಣ್ಣನ ...

READ MORE

Related Books