ಸೌಹಾರ್ದ ಸಂಕೇತ : ಸ್ವಾಮಿ ವಿವೇಕಾನಂದ

Author : ಬರಗೂರು ರಾಮಚಂದ್ರಪ್ಪ

Pages 28

₹ 20.00




Year of Publication: 2018
Published by: ಜನ ಪ್ರಕಾಶನ

Synopsys

ಸ್ವಾಮಿ ವಿವೇಕಾನಂದ ಬದುಕು ಹಾಗೂ ಸಾಧನೆಯ ಹಾಗೂ ಅವರ ಸೌಹಾರ್ದದ ಚಿಂತನೆಗಳನ್ನು ಈ ಕೃತಿಯಲ್ಲಿ ಚರ್ಚಿಸಿದ್ದಾರೆ ಲೇಖಕ ಬರಗೂರು ರಾಮಚಂದ್ರಪ್ಪ. ವಿವೇಕಾನಂದರ ಕುರಿತು ಹಲವಾರು ಕೃತಿಗಳು ಈಗಾಗಲೇ ಪ್ರಕಟವಾಗಿದ್ದರೂ ಈ ಕೃತಿಯು ವಿವೇಕಾನಂದರ ಸಂದೇಶಗಳು ಹಾಗೂ ಅವರ ಸರಳ ವ್ಯಕ್ತಿತ್ವದ ಕುರಿತು ಎಳೆಎಳೆಯಾಗಿ ವಿವರಿಸಿದೆ.

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books