ಸೌಹಾರ್ದ ಸೌರಭ

Author : ರಂಜಾನ್ ದರ್ಗಾ

Pages 124

₹ 50.00




Year of Publication: 2011
Published by: ಲೋಹಿಯ ಪ್ರಕಾಶನ
Address: ಕ್ಷಿತಿಜ ಕಪ್ಪಗಲ್ಲು ರಸ್ತೆ, ಗಾಂಧಿನಗರ, ಬಳ್ಳಾರಿ-583103

Synopsys

ಇಡೀ ಜಗತ್ತಿನಲ್ಲಿ ಯಾವ ದೇಶದಲ್ಲೂ ಇರದಷ್ಟು ಧರ್ಮ, ಜಾತಿ, ಭಾಷೆ, ಬುಡಕಟ್ಟು ನಮ್ಮ ದೇಶದಲ್ಲಿದೆ. ಇಷ್ಟೆಲ್ಲಾ ಭಿನ್ನತೆಗಳ ನಡುವೆ ಸೌಹರ್ದತೆಯನ್ನು ಕಾಪಾಡಿಕೊಂಡು  ಬಂದಿರುವುದೇ ದೇಶದ ಹೆಗ್ಗಳಿಕೆಯಾಗಿದೆ. ಮಾನವತೆಯ ಸಾಕಾರ ಮೂರ್ತಿ, ಭಾವನಾಜೀವಿಯಾದ ಸೋದರ ರಂಝಾನ್‍ದ ದರ್ಗಾ ಉದಾತ್ತ ವಿಚಾರಗಳನ್ನೊಳಗೊಂಡ ಲೇಖನಗಳನ್ನು ಈ ಕೃತಿಯಲ್ಲಿ ನೀಡಿದ್ದಾರೆ. ಹಲವು ಜಾತಿ ಧರ್ಮಗಳನ್ನು ಹೊಂದಿರುವ ದೇಶದಲ್ಲಿ ಇವತ್ತಿಗೂ ಕೂಡ ಶಾಂತಿ ಸೌಹಾರ್ದತೆಯನ್ನು ಕಾಪಾಡುವಲ್ಲಿ  ಹೇಗೆ ಸಾಧ್ಯವಾಗಿದೆ ಎಂಬುದನ್ನು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.

About the Author

ರಂಜಾನ್ ದರ್ಗಾ

ಲೇಖಕ ರಂಜಾನ್ ದರ್ಗಾ ಅವರು ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ಗ್ರಾಮದವರು. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರ ಪ್ರಗತೀಪರ ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ಕಾವ್ಯ ಬಂತು ಬೀದಿಗೆ, ಹೊಕ್ಕುಳಲ್ಲಿ ಹೂವಿದೆ, ಬಸವಣ್ಣನವರ ದೇವರು, ಬಸವ ಧರ್ಮದ ವಿಶ್ವ ಸಂದೇಶ, ನಡೆ ನುಡಿ ಸಿದ್ದಾಂತ, ವಚನ ವಿವೇಕ ಸೇರಿದಂತೆ ಹಲವಾರು ಕೃತಿಗಳನ್ನ ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ವಚನ ಚಿಂತಕ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ರಂಜಾನ್ ದರ್ಗಾ ಅವರಿಗೆ ಸಂದಿವೆ. ...

READ MORE

Related Books