ಸಾವಂತ್ರಿ

Author : ಕೃಷ್ಣಮೂರ್ತಿ ಪುರಾಣಿಕ

Pages 160

₹ 80.00




Year of Publication: 1974
Published by: ಇಂದಿರಾ ಪ್ರಕಾಶನ
Address: ನಂ.972-ಸಿ, 4ನೇ ಇ ಬ್ಲಾಕ್, ರಾಜಾಜಿನಗರ, ಬೆಂಗಳೂರು- 560010

Synopsys

‘ಸಾವಂತ್ರಿ’ ಕೃಷ್ಣಮೂರ್ತಿ ಪುರಾಣಿಕರ ಸಾಮಾಜಿಕ ಕಾದಂಬರಿ ಅಲ್ಲದೇ ಇದು ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕಾದಂಬರಿಯಾಗಿದ್ದು ಸುಳಿ ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ. ಕಳೆದ ಶತಮಾನದ ಕನ್ನಡ ಬರಹಗಾರರಲ್ಲಿ ಕೆಲವು ಬರಹಗಾರರ ಹೆಸರು ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಅಚ್ಚಳಿಯದೆ ಬೆಳಗುತ್ತಿವೆ. ಅಂಥ ಬರಹಗಾರರಲ್ಲಿ ಒಂದು ಹೆಸರು ಕೃಷ್ಣಮೂರ್ತಿ ಪುರಾಣಿಕರು. ಹೆಣ್ಣು ಮಕ್ಕಳಲ್ಲಿ ಓದಿನ ಅಭಿರುಚಿಯನ್ನು ಬೆಳೆಸಿದ ಸಾಹಿತಿಗಳಲ್ಲಿ ಇವರು ಅಗ್ರಗಣ್ಯರು. ಓದು ಬಲ್ಲವರ ಹೃದಯಗಳನ್ನು ಇವರ ಕಾದಂಬರಿಗಳು ತಟ್ಟಿವೆ. ಓದು ಬರಲಿ, ಬಿಡಲಿ ಎಲ್ಲರ ಹೃದಯ ತಟ್ಟಿವೆ ಇವರ ಕಾದಂಬರಿ ಆಧಾರಿತ ಚಲನಚಿತ್ರಗಳು ಪ್ರಸ್ತುತ ಸಾವಂತ್ರಿ ಸಹ ಮಹಿಳಾ ಪ್ರಧಾನ ಕಾದಂಬರಿಯಾಗಿದ್ದು. ಹೆಣ್ಣಿನ ತೊಳಲಾಟಗಳನ್ನು ಅರ್ಥಪೂರ್ಣವಾಗಿ ಕಟ್ಟಿಕೊಟ್ಟಿದೆ.

About the Author

ಕೃಷ್ಣಮೂರ್ತಿ ಪುರಾಣಿಕ
(05 September 1911 - 09 November 1985)

ಅಗ್ರಶ್ರೇಣಿಯ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕರು ಹುಟ್ಟಿದ್ದು ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ.1911 ಸೆಪ್ಟಂಬರ್ 5ರಂದು. 1933ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಪುರಾಣಿಕರು 1946ರಲ್ಲಿ 'ರಾಮೂನ ಕಥೆಗಳು' ಪ್ರಕಟಿಸಿದರು. ಅವರ 'ಧರ್ಮದೇವತೆ' ಕಾದಂಬರಿ 'ಕರುಣೆಯೇ ಕುಟುಂಬದ ಕಣ್ಣು' ಎಂಬ ಚಲನಚಿತ್ರವಾಗಿದೆ. ಪುರಾಣಿಕರ 11 ಕೃತಿಗಳು  ಬೆಳ್ಳೆತೆರೆ ಕಂಡಿವೆ.  'ಸನಾದಿ ಅಪ್ಪಣ್ಣ' ಕನ್ನಡಿಗರೆಂದೂ ಮರೆಯದ ಕೃತಿ. ಮೊದಲ ಪ್ರಕಟಿತ ಗದ್ಯ ಕೃತಿ, 'ರಾಮೂನ ಕಥೆಗಳು'. ಮೊದಲ ಕವನ ಸಂಕಲನ 'ಬಾಳ ಕನಸು'. ಮೊದಲ ಕಾದಂಬರಿ 'ಮುಗಿಲಮಲ್ಲಿಗೆ'. 'ಮೌನಗೌರಿ', 'ಮುತ್ತೈದೆ', `ಮನೆ ತುಂಬಿದ ಹೆಣ್ಣು', 'ಮಣ್ಣಿನ ಮಗಳು', 'ಕುಲವಧು', 'ಮನಸೋತ ಮನದನ್ನೆ', 'ಧರ್ಮ ...

READ MORE

Related Books