ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ತತ್ಸಮ-ತದ್ಭವ ಕೋಶ

Author : ಎಂ.ವಿ ನಾಗರಾಜರಾವ್

Pages 88

₹ 35.00




Year of Publication: 2014
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕರಣವೆಂಬುದು ಕಬ್ಬಿಣದ ಕಡಲೆ ಎಂಬ ಅಭಿಪ್ರಾಯವಿರುತ್ತದೆ. ಆದರೆ ಅದರ ಉಪಯೋಗ ಮತ್ತು ಪ್ರಾಮುಖ್ಯತೆ ಅವರಿಗೆ ಗೊತ್ತಿಲ್ಲದೇ ಇರದು. ಹಾಗಾಗಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಸರಳವಾಗಿ ತತ್ಸಮ-ತದ್ಭವ ಸೇರಿದಂತೆ ವ್ಯಾಕರಣವನ್ನು ಅರ್ಥೈಸುವ ಸಲುವಾಗಿ ಹಿರಿಯ ಲೇಖಕ ಎಂ.ವಿ ನಾಗರಾಜರಾವ್ ಅವರು ಈ ಕೃತಿಯನ್ನು ರಚಿಸಿದ್ದಾರೆ. ಇಲ್ಲಿ ವಿರುದ್ಧಾರ್ಥಕ ಶಬ್ದಗಳು, ಶಬ್ದ ಸಮೂಹಗಳಿಗೆ ಒಂದೇ ಪದ, ಪರ್ಯಾಯವಾಚಕ ಶಬ್ದಗಳು, ಚಂಪೂ, ಶತಕ, ವಚನ ಮೊದಲಾದ ಪ್ರಮುಖ ಸಾಹಿತ್ಯ ರೂಪಗಳ ಕುರಿತಾಗಿಯೂ ವಿವರಿಸಲಾಗಿದೆ. ಜೊತೆಗೆ ಗಾದೆಗಳನ್ನು ಇಲ್ಲಿ ಸೇರಿಸಲಾಗಿದೆ. ಒಟ್ಟಾರೆ ವಿದ್ಯಾರ್ಥಿಗಳಿಗೆ ಇದೊಂದು ಕಲಿಕೆಯ ಕೈಪಿಡಿ ಎನ್ನಬಹುದಾಗಿದೆ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books