ಶಬ್ದಮಣಿ ದರ್ಪಣಂ

Author : ತ.ಸು. ಶಾಮರಾಯ

Pages 352

₹ 200.00




Year of Publication: 2008
Published by: ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ
Address: ಮೈಸೂರು

Synopsys

ಕೇಶಿರಾಜ ವಿರಚಿತ ‘ಶಬ್ದಮಣಿ ದರ್ಪಣಂ’ ಕೃತಿಯ ಕುರಿತ ಮಾಹಿತಿಗಳನ್ನು ಹಿರಿಯ ಲೇಖಕ ತ.ಸು.ಶಾಮರಾಯರು ಸಂಪಾದಿಸಿದ್ದಾರೆ. ತ.ಸು. ಶಾಮರಾಯರ ಜನ್ಮ ಶತಮಾನೋತ್ಸವದ ವರ್ಷದ ಆಚರಣೆಯ ಅಂಗವಾಗಿ ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ ಈ ಕೃತಿ ಪ್ರಕಟಿಸಿದೆ. ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ್ಯ ಕನ್ನಡ ವ್ಯಾಕರಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಶಬ್ದಮಣಿ ದರ್ಪಣಂ’ ದಲ್ಲಿ ಹಳಗನ್ನಡದ ಭಾಷಾ ಸ್ಥಿತಿ-ಗತಿಗಳು ಹೇಗಿದ್ದವೆಂಬುದನ್ನು ಸವಿಸ್ತಾರವಾಗಿ, ಸಪ್ರಮಾಣ ವಿವೇಚನೆಯಿಂದ ವರ್ಣಿಸುತ್ತದೆ. ಆ ಕೃತಿಯ ಕುರಿತಾಗಿ ಸರಳ ಕನ್ನಡದಲ್ಲಿ ಮಹತ್ವದ ಮಾಹಿತಿಗಳನ್ನು ನೀಡಲಾಗಿದೆ.

About the Author

ತ.ಸು. ಶಾಮರಾಯ
(12 June 1906 - 21 August 1998)

ತ.ಸು.ಶಾಮರಾಯರು ಕನ್ನಡದ ಪ್ರಮುಖ ಸಾಹಿತಿಗಳು ಮತ್ತು ವಿದ್ವಾಂಸರು. ಇವರು (12-06-1906) ಜನಿಸಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ. ತಂದೆ ಸುಬ್ಬಣ್ಣ ಮತ್ತು ತಾಯಿ ಲಕ್ಷ್ಮಿದೇವಮ್ಮ. ಬಿ.ಎ.ಆನರ್ಸ್ ಪದವಿಯನ್ನು ಚಿನ್ನದ ಪದಕದೊಂದಿಗೆ ಪಡೆದು, ಕಾಲೇಜ್ ಅಧ್ಯಾಪಕರಾದರು. ಕುವೆಂಪು ಮಾರ್ಗದರ್ಶನದಲ್ಲಿ , 'ಕನ್ನಡ ನಾಟಕ ಎಂಬ ಪ್ರಬಂಧ ಮಂಡಿಸಿ ಎಂ.ಎ. ಪದವಿ ಪಡೆದು, ಪ್ರಾಧ್ಯಾಪಕ ವೃತ್ತಿ ಕೈಗೊಂಡರು. ಮೈಸೂರು ವಿ.ವಿ. ಪ್ರಸಾರಾಂಗದ ನಿರ್ದೇಶಕ, ಮಹಾ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ವ್ಯಾಕರಣ ಕೋಶಕ್ಕೆ ಸಂಬಂಧಿಸಿದ ಐದು ಕೃತಿಗಳು, ಕನ್ನಡ ನಾಟಕ, ಜನಪ್ರಿಯ ಕನ್ನಡ ಸಾಹಿತ್ಯ ಚರಿತ್ರೆ, ವಿಮರ್ಶಾ ಗ್ರಂಥಗಳು, ಅಜಿತ ಪುರಾಣ ಸಂಗ್ರಹ, ಅರಣ್ಯ ಪುರಾಣ ಸಂಗ್ರಹ ( ಇದೇ ರೀತಿ 11 ಕಾವ್ಯ ಸಂಗ್ರಹಗಳು), ಮಂಕನ ಮಡದಿ ...

READ MORE

Related Books