ಶಕ್ತಿ ಮತ್ತು ಅಂತ

Author : ಎ.ಎನ್.ರಮೇಶ್. ಗುಬ್ಬಿ

Pages 72

₹ 66.00




Year of Publication: 2017
Published by: ಗೋಮಿನಿ ಪ್ರಕಾಶನ
Address: ಶ್ರೀ ವೀರಭದ್ರ ಸ್ವಾಮಿ ನಿಲಯ, 1ನೇ ಮುಖ್ಯರಸ್ತೆ, 5ನೇ ಕ್ರಾಸ್, ವಿಶ್ವಣ್ಣ ಲೇಔಟ್, ಶಾಂತಿನಗರ್, ತುಮಕೂರು- 572102
Phone: 9986693113

Synopsys

‘ಶಕ್ತಿ ಮತ್ತು ಅಂತ’ ಎ.ಎನ್. ರಮೇಶ್ ಗುಬ್ಬಿ ಅವರ ಅವಳಿ ನಾಟಕಗಳ ಸಂಕಲನ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ಎ.ಎನ್. ರಮೇಶ್ ಗುಬ್ಬಿ ಅವರು ವೃತ್ತಿಯಲ್ಲಿ ಕಾರವಾರ ಬಳಿಯ ಕೈಗಾದಲ್ಲಿರುವ ಭಾರತೀಯ ಅಣುಶಕ್ತಿ ನಿಗಮದ ಉದ್ಯೋಗಿಯಾದ್ದಾರೆ. ಇದರೊಂದಿದೆ ಸಾಹಿತ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುವ ರಮೇಶ್ ಗುಬ್ಬಿ ಅವರು ಕತೆ, ಕವನ, ಚಿತ್ರಕಥೆ ರಚನೆ ಜೊತೆಗೆ ನಾಟಕಗಳನ್ನು ರಚಿಸಿದ್ದಾರೆ. ಈ ಕೃತಿಗೆ ನಟ, ನಿರ್ದೇಶಕ ಎಚ್.ಜಿ. ಸೋಮಶೇಖರರಾವ್, ಹಾಗೂ ಮಂಡ್ಯ ರಮೇಶ್ ಅವರ ಬೆನ್ನುಡಿ ಬರಹಗಳಿವೆ. ಕೃತಿ ಮತ್ತು ಕೃತಿಕಾರರ ಬಗ್ಗೆ ಬರೆಯುತ್ತಾ ನಮಗೆಲ್ಲಾ ಬೆಳಕನ್ನು ಕೊಡುವ ಕೆಲಸದಲ್ಲಿ ನಿರತರಾಗಿರುವ ಈ ಕೈಗಾದ ಮೂಲಕ ರಮೇಶ್ ರವರಿಂದ ಮತ್ತಷ್ಟು ಬೆಳಕು ಕಾಣುವ ಕೆಲಸಗಳ ಸಾಧ್ಯತೆ ಸ್ಪಷ್ಟವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಇನ್ನು ಅಂತ ನಾಟಕದ ಮುನ್ನುಡಿಯಲ್ಲಿ ಕರ್ನಾಟಕ ತುಂಬೆಲ್ಲ ಪ್ರಬಲ ರಂಗ ಚಳುವಳಿಯ ಗಾಳಿ ತುಂಬಿರುವ ಈ ಗಳಿಗೆಗಳಲ್ಲಿ ಈ ಪುಟ್ಟ ನಾಟಕದ ದೊಡ್ಡ ದನಿಗೆ ಸಲಾಮ್ ಹೇಳಲೇಬೇಕು ಎಂದು ಮಂಡ್ಯ ರಮೇಶ್ ಭರವಸೆಯ ಮಾತುಗಳನ್ನಾಡಿದ್ದಾರೆ.

About the Author

ಎ.ಎನ್.ರಮೇಶ್. ಗುಬ್ಬಿ

ಲೇಖಕ ಎ.ಎನ್.ರಮೇಶ್ ಗುಬ್ಬಿ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ವೃತ್ತಿಯಲ್ಲಿ ಕಾರವಾರ ಬಳಿಯ ಕೈಗಾದಲ್ಲಿರುವ ಭಾರತೀಯ ಅಣುಶಕ್ತಿ ನಿಗಮದ ಉದ್ಯೋಗಿ. ಪ್ರವೃತ್ತಿಯಲ್ಲಿ ಸಾಹಿತಿ. ಕವನ, ಚುಟುಕು, ಕಥೆ, ನಾಟಕ, ಚಿತ್ರಕಥೆ ರಚನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ಗುಬ್ಬಿಯ ಕಲರವ’, ‘ಚುಟುಕು-ಚಿತ್ತಾರ’, ‘ಎಡನೀರೊಡನೆಯನಿಗೆ ಚುಟುಕು ಪುಷ್ರ್ಪಾಚನೆ’, ‘ಕೇಶವನಾಮ ಚೈತನ್ಯಧಾಮ’ ಎಂಬ ಚುಟುಕು ಸಂಕಲನಗಳು, ‘ಹನಿ-ಹನಿ’ ಎಂಬ ಹನಿಗವನ ಸಂಕಲನ, ‘ಭಾವದಂಬಾರಿ’ ಕಥಾಸಂಕಲನ, ‘ಶಕ್ತಿ ಮತ್ತು ಅಂತ’ ಅವಳಿ ನಾಟಕ ಸಂಕಲನ, ‘ಕಿಸ್ ಮಾತ್ರೆ’ ಎನ್ನುವ ಹಾಸ್ಯಗವನ ಸಂಕಲನ, ‘ಹೂವಾಡಿಗ’, ‘ಕಾಡುವ ಕವಿತೆಗಳು’ ಕವನ ಸಂಕಲನಗಳು ಪ್ರಕಟವಾಗಿದೆ. ಕಾಸರಗೋಡಿನ ಎಡನೀರಿನಲ್ಲಿ ನಡೆದ ಪ್ರಪ್ರಥಮ ಅಂತರರಾಜ್ಯ ಚುಟುಕು ಸಮ್ಮೇಳನದಲ್ಲಿ ‘ಚುಟುಕು ಭಾರ್ಗವ’ ...

READ MORE

Related Books