ಶರಣ ಚಿಂತನೆಯ ನೆಲೆಯಲ್ಲಿ

Author : ಬಾಲಚಂದ್ರ ಜಯಶೆಟ್ಟಿ

Pages 166

₹ 100.00




Year of Publication: 2012
Published by: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು
Address: ಮೈಸೂರು.

Synopsys

ಶರಣ ಸಾಹಿತ್ಯಕ್ಕೆ ಸಂಬಂಧಿಸಿದ ತೌಲನಿಕ ಅಧ್ಯಯನ ಕುರಿತಾದ 8 ಲೇಖನಗಳು ’ಶರಣ ಚಿಂತನೆಯ ನೆಲೆಯಲ್ಲಿ’ ಕೃತಿಯಲ್ಲಿವೆ. ಮಹಾರಾಷ್ಟ್ರದ ಚಿಂತಕರನ್ನು ಕೇಂದ್ರವಾಗಿರಿಸಿಕೊಂಡು ಇತರೆ ಖ್ಯಾತ ಚಿಂತಕರ ವಿಚಾರಗಳೊಂದಿಗೆ ತೌಲನಿಕವಾಗಿ ಅಧ್ಯಯನ ಮಾಡಿದ ಪ್ರಯತ್ನ ಇದಾಗಿದೆ. ಬಸವ ದೃಷ್ಟಿ ಕೇಂದ್ರವು ಆಯೋಜಿಸುವ ಶಿಬಿರಗಳು ತಮಗೆ ತೌಲನಿಕ ಅಧ್ದ್ರಯನಗಳಿಗೆ ಪ್ರೇರಣೆ ನೀಡಿದವು ಎನ್ನುತ್ತಾರೆ ಲೇಖಕ ಭಾಲಚಂದ್ರ ಜಯಶೆಟ್ಟಿ. ಲಿಂಗಾಯತರ ಕರಡಗೆಯಿಂದ ಶರಣರ ಚಿಂತನೆಗಳು ಮೊದಲು ಹೊರ ಬರಬೇಕು ಎಂಬ ಆಶಯ ಈ ಲೇಖನಗಳಲ್ಲಿ ವ್ಯಕ್ತವಾಗಿದೆ.

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books