ಶರಣ ಮೋನಪ್ಪಯ್ಯನ ಚಾರಿತ್ರ್ಯ

Author : ಎಫ್.ಟಿ.ಹಳ್ಳಿಕೇರಿ

Pages 206

₹ 120.00




Year of Publication: 2007
Published by: ಕರ್ನಾಟಕ ಸರ್ಕಾರ
Address: ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರು

Synopsys

‘ಶರಣ ಮೋನಪ್ಪಯ್ಯನ ಚಾರಿತ್ರ್ಯ’ ಲೇಖಕ ಡಾ.ಎಫ್.ಟಿ. ಹಳ್ಳಿಕೇರಿ ಸಂಪಾದಿಸಿರುವ ಮಹತ್ವದ ಕೃತಿ. ಇದು ಹಿಂದೂ-ಮುಸ್ಲಿಂ ಸಾಮರಸ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ತಿಂಥಿಣಿಯ ಮೌನೇಶ್ವರ ಶರಣರ ಚರಿತ್ರೆ. ತಮ್ಮ ಮಹಿಮೆಯಿಂದಲೇ ಎಲ್ಲರನ್ನೂ ಆಕರ್ಷಿಸಿದ್ದ ಮೋನೇಶ್ವರರು ಲಕ್ಷ್ಮೇಶ್ವರ, ಉಳವಿ, ಕಲ್ಯಾಣ, ವಿಜಯಪುರ, ಶಹಾಪುರ ಮುಂತಾದೆಡೆ ತಿರುಗಾಡಿ, ಮಹಿಮೆಗಳನ್ನು ಮೆರೆದವರೆಂಬುದು ಈಗ ಇತಿಹಾಸ.

ವರವಿ ಮತ್ತು ತಿಂಥಿಣಿ ಸ್ಥಳಗಳಲ್ಲಿ ಇವರ ಹೆಸರಿನ ದೇವಾಲಯಗಳಿವೆ. ಬಿಜಾಪುರದ ಸುತ್ತಮುತ್ತ ಅನೇಕ ಗುಡಿಗಳಿವೆ. ಇವು ಹಿಂದೂ-ಮುಸ್ಲಿಂ ಬೆರೆತ ಶೈಲಿಗಳಲ್ಲಿವೆ. ಮೌನೇಶ್ವರರು ವಿಶ್ವಕರ್ಮ ಸಮಾಜದಿಂದ ಬಂದವರಷ್ಟೆ. ಅವರು ಇತ್ತ ವಿಶ್ವಕರ್ಮರಾಗಿಯೂ ಅತ್ತ ವೀರಶೈವ ಪರಂಪರೆಯವರಾಗಿಯೂ ಇದ್ದವರು. ಅವರಿದ್ದ ಕಾಲದಲ್ಲಿ ಯುದ್ಧದ ಕಾರ್ಮೋಡ ಸದಾ ಇದ್ದೇಇತ್ತು. ದಕ್ಷಿಣ ಭಾರತದಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಜೀವನದುದ್ದಕ್ಕೂ ಸಾರಿದವರು ಮೌನೇಶ್ವರರೇ. ಓಂ ಮತ್ತು ಅಲ್ಲಾ ಒಂದೇ ಎಂಬ ಅಧ್ಯಯನ ಭಾವದ ಸಾಂಸ್ಕೃತಿಕ ಸಿದ್ಧಿಯನ್ನು ಮೊಳಗಿಸಿದ ಮಹಾ ಮಾನವತಾವಾದಿ, ಸಾಮಾಜಿಕ ಸಂತ ತಿಂಥಿಣಿ ಮೋನಪ್ಪಯ್ಯನ ಚರಿತ್ರೆಯೇ ಈ ಕೃತಿ.

About the Author

ಎಫ್.ಟಿ.ಹಳ್ಳಿಕೇರಿ
(01 June 1966)

ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತ್ರಪ್ರತಿಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಅಧ್ಯಾಪಕ ಮತ್ತು ಮುಖ್ಯಸ್ಥರು. ಎಂ.ಎ, ಎಂಫಿಲ್ ಪಿಎಚ್‌.ಡಿ ಪದವಿ ಪಡೆದಿರುವ ಅವರಿಗೆ ಹಸ್ತಪ್ರತಿ-ಗ್ರಂಥಸಂಪಾದನೆ, ಹಾಲುಮತ ಸಂಸ್ಕ್ರತಿ, ಹಳೆಗನ್ನಡ-ನಡುಗನ್ನಡ -ನಡುಗನ್ನಡ ಸಾಹಿತ್ಯ, ಯೋಗವಿಜ್ಞಾನ ಆಸಕ್ತಿಯ  ಅಧ್ಯಯನದ ಕ್ಷೇತ್ರಗಳು. ’ಕೆರೆಯ ಪದ್ಮರಸ ಮತ್ತು ಆತನ ವಂಶಜರು , ಕಂಠಪತ್ರ (1,2,3), ಹಾಲುಪತ್ರ’ ಪ್ರಕಟಿತ ಕೃತಿಗಳು. ಹಾಲುಮಠ ಅಧ್ಯಯನ ಪೀಠದ ಸಂಚಾಲಕ, ಅಂತರಾಷ್ಟ್ರೀಯ ವಚನ ಅಧ್ಯಯನ ಕೇಂದ್ರದ  ಮುಖ್ಯಸ್ಥರಾಗಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗ್ರಂಥ ಪ್ರಶಸ್ತಿ, ಗುಲಬರ್ಗಾ ವಿಶ್ವವಿದ್ಯಾನಿಲಯದಿಂದ ರಾಜ್ಯೋತ್ಸವ ಪ್ರಶಸ್ತಿ, ಬೇಂದ್ರೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅತ್ಯುನ್ನತ ಸಂಶೋಧನಾ ಗ್ರಂಥ ಪ್ರಶಸ್ತಿ ಮುಂತಾದ ಪ್ರಮುಖ ಪ್ರಶಸ್ತಿಗಳು ಇವರಿಗೆ ...

READ MORE

Related Books