ಶಾಸ್ತ್ಯೀಯ ಸಂಪುಟ-4

Author : ಟಿ.ವಿ. ವೆಂಕಟಾಚಲಶಾಸ್ತ್ರೀ

Pages 249

₹ 450.00




Year of Publication: 2018
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಖ್ಯಾತ ಭಾಷಾ ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರ ಕೃತಿ -ಶಾಸ್ತ್ಯೀಯ ಸಂಪುಟ-4. ಈ ಕೃತಿಯಲ್ಲಿ ಕನ್ನಡ ಭಾಷೆ, ಚರಿತ್ರೆ, ಮಧ್ಯಕಾಲೀನ ಹಾಗೂ ಆಧುನಿಕ ಸಾಹಿತ್ಯದ ವಿಮರ್ಶೆ ಹಾಗೂ ಸಮೀಕ್ಷೆಗಳನ್ನು ಕಟ್ಟಿಕೊಟ್ಟ ಗ್ರಂಥವಿದು. ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಈ ಕೃತಿಯು ಮಹತ್ವದ ಆಕರ ಗ್ರಂಥವಾಗಿದೆ.

About the Author

ಟಿ.ವಿ. ವೆಂಕಟಾಚಲಶಾಸ್ತ್ರೀ
(26 August 1933)

ಸಂಶೋಧಕ, ಪ್ರಾಧ್ಯಾಪಕ ಟಿ.ವಿ.ವೆಂಕಟಾಚಲ ಶಾಸ್ತ್ರೀ ಅವರು ಕನ್ನಡ ಭಾಷೆಯನ್ನು ಶ್ರೀಮಂತಿಕೆ ಹೆಚ್ಚಿಸಿದವರು. ಶಾಸ್ತ್ರಿಗಳು,1933ರ ಆಗಸ್ಟ್ 26 ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು.  ತಂದೆ ವೆಂಕಟಸುಬ್ಬಾಶಾಸ್ತ್ರಿಗಳು. ತಾಯಿ ಸುಬ್ಬಮ್ಮ. ಎಂ.ಎ. ಮತ್ತು ಪಿಎಚ್.ಡಿ. ಪದವಿ ಪಡೆದ ನಂತರ ವೆಂಕಟಾಚಲ ಶಾಸ್ತ್ರಿಗಳು ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವೃತ್ತಿಯನ್ನು ಮಾಡಿ, ನಂತರ, ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು. ಕನ್ನಡ ನಿಘಂಟು ರಚನಾ ಸಮಿತಿಯ ಸಂಪಾದಕ ಸಮಿತಿಯ ಸದಸ್ಯರಾಗಿದ್ದ ಅವರು ನಂತರ ನಿಘಂಟು ಪರಿಷ್ಕರಣ ಸಮಿತಿ ಪ್ರಧಾನ ಸಂಪಾದಕರಾಗಿದ್ದರು. ವ್ಯಾಕರಣ, ಛಂದಸ್ಸು, ...

READ MORE

Related Books