ಶತದ್ರು ದಂಡೆಗೆ

Author : ಭಾರತೀಸುತ (ಶಾನಭಾಗ ರಾಮಯ್ಯ ನಾರಾಯಣರಾವ್)

Pages 252

₹ 175.00




Year of Publication: 2009
Published by: ಧೃತಿ ಪ್ರಕಾಶನ
Address: ಎನ್ ಆರ್ ಕಾಲೋನಿ, ಬಸವನಗುಡಿ, ಬೆಂಗಳೂರು.

Synopsys

'ಶತದ್ರು ದಂಡೆಗೆ' ಕಾದಂಬರಿ 1947-1948 ರ ಭಾರತ ಸ್ವಾತಂತ್ರ್ಯ ನಂತರದ ದಿನಗಳ ಚಿತ್ರಣ ; ವಿಶೇಷವಾಗಿ ಹಿಂದೂಸ್ತಾನ ಮತ್ತು ಪಾಕಿಸ್ತಾನಗಳ ಉಗಮ ಕಾಲದ ಹಿಂಸಾತ್ಮಕ ಸಂಘರ್ಷವನ್ನು ಈ ಕೃತಿ ಕಟ್ಟಿ ಕೊಡುತ್ತದೆ. ಹಿಂದೂ- ಮುಸ್ಲಿಮ್ ರ ವೈಷಮ್ಯಗಳ ನಡುವೆಯೂ ಮಾನವೀಯ ಮೌಲ್ಯಗಳ ಸೆಲೆ ಬತ್ತಿಲ್ಲ ಎನ್ನುವುದನ್ನು ಅತ್ಯಂತ ಸರಳವಾಗಿ ಸತ್ಯವನ್ನೇ ನಿರೂಪಿಸುತ್ತದೆ. ಐತಿಹಾಸಿಕ ಅಂಶಗಳನ್ನು ಒಳಗೊಂಡಿರುವ ಈ ಕಾದಂಬರಿ ಅಮರಚಂದ ಮತ್ತು ಸ್ವರೂಪರಾಣಿ ಅವರ ಆಕಸ್ಮಿಕ ಭೇಟಿಯಿಂದಲೇ ಆರಂಭವಾಗುತ್ತದೆ. ಪ್ರಥಮ ಮುದ್ರಣ- 1977, ದ್ವಿತೀಯ ಮುದ್ರಣ-2009.

About the Author

ಭಾರತೀಸುತ (ಶಾನಭಾಗ ರಾಮಯ್ಯ ನಾರಾಯಣರಾವ್)
(15 May 1915 - 04 April 1976)

ಕೊಡಗು ಜಿಲ್ಲೆಯ ಬಿಳಿಗೇರಿಯಲ್ಲಿ ಜನಿಸಿದ ಶಾನಭಾಗ ರಾಮಯ್ಯ ನಾರಾಯಣರಾವ್ ಅವರು 'ಭಾರತೀಸುತ' ಎಂಬ ಹೆಸರಿನಲ್ಲಿ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ರಾಷ್ಟ್ರೀಯ ಚಳವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆ ವಾಸ ಅನುಭವಿಸಿದ್ದ ಅವರು ಬಿಡುಗಡೆಯ ನಂತರ ಕಾದಂಬರಿ- ಸಾಹಿತ್ಯ ರಚನೆ ಆರಂಭಿಸಿದರು. ಪತ್ರಿಕೋದ್ಯಮದಲ್ಲಿ ಆಸಕ್ತರಾಗಿದ್ದ ಅವರು ಕೆಲಕಾಲ 'ರಾಷ್ಟಬಂಧು' ಮತ್ತು 'ಗುರುವಾಣಿ' ಎಂಬ ಪತ್ರಿಕೆ ನಡೆಸಿದರು. ನಂತರ ಶಿಕ್ಷಕ ವೃತ್ತಿ ಆರಂಭಿಸಿದ ಅವರು ಕಥೆ-ಕಾದಂಬರಿಗಳ ರಚನೆಯಲ್ಲಿ ತೊಡಗಿಸಿಕೊಂಡರು. ಅವರು ರಚಿಸಿದ ’ಎಡಕಲ್ಲು ಗುಡ್ಡದ ಮೇಲೆ’, ’ಹುಲಿಯ ಹಾಲಿನ ಮೇವು’, ’ಗಿರಿಕನ್ನಿಕೆ’, ’ಬಯಲುದಾರಿ’ ಕಾದಂಬರಿಗಳು ಚಲಚಿತ್ರಗಳಾಗಿ ಯಶಸ್ವಿಯಾದವು.  ಸಂತಾನಭಿಕ್ಷೆ ಇಳಿದು ಬಾ ತಾಯಿ, ಬೆಂಕಿಯ ಮಳೆ, ವಕ್ರ ರೇಖೆ, ಸಾಧನ ಕುಟೀರ, ಹುಲಿಬೋನು, ಗಿಳಿಯು ಪಂಜರದೊಳಿಲ್ಲ, ...

READ MORE

Related Books