ಶತಮಾನದಂಚಿನಲಿ

Author : ನಾಗತಿಹಳ್ಳಿ ಚಂದ್ರಶೇಖರ್‌

Pages 148

₹ 180.00




Year of Publication: 2021
Published by: ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ
Address: Abhivyakti Samskruthika Vedike, No 166, 28th cross, 17th Main, BSK 2nd Stage, Bengaluru-560070
Phone: 080-26712230/ 9845878899

Synopsys

ಕನ್ನಡ ಚಲನಚಿತ್ರ ಖ್ಯಾತ ನಿದೇರ್ಶಕ, ಲೇಖಕ ಡಾ. ನಾಗತಿಹಳ್ಳಿ ಚಂದ್ರಶೇಖರ ಅವರು ಬರೆದ 18 ಲೇಖನಗಳ ಸಂಕಲನ-ಶತಮಾನದಂಚಿನಲಿ. ಪ್ರಸ್ತುತ ವಿದ್ಯ,ಮಾನಗಳನ್ನು ಕೇಂದ್ರೀಕರಿಸಿದ ಬರೆದ ಬರಹಗಳು, ವಿಷಯ, ನಿರೂಪಣೆಯ ತೀಕ್ಷ್ಣ ಶೈಲಿಯೊಂದಿಗೆ ಓದುಗರ ಗಮನ ಸೆಳೆಯುತ್ತವೆ. ಈ ಬರಹಗಳು ಶತಮಾನದಂಚಿನಲಿ ನಿಂತ ಹಿನ್ನೋಟಕ್ಕೆ ದಕ್ಕಿದ ಗ್ರಹಿಕೆಗಳು. ಬಹು ಆಳವಾದ, ವಿಸ್ತಾರವಾದ ಹರವು ಪಡೆದಿವೆ. ಖ್ಯಾತ ಪತ್ರಕರ್ತ ಪಿ. ಲಂಕೇಶ್ , ಅವರು ಕೃತಿಗೆ ಮುನ್ನುಡಿ ಬರೆದಿದ್ದಾರೆ.

About the Author

ನಾಗತಿಹಳ್ಳಿ ಚಂದ್ರಶೇಖರ್‌
(15 August 1958)

ನಾಗತಿಹಳ್ಳಿ ಚಂದ್ರಶೇಖರ್ ಮೂಲತಃ ಮಂಡ್ಯ ಜಿಲ್ಲೆಯ ನಾಗತಿಹಳ್ಳಿಯವರು. ತಂದೆ ತಿಮ್ಮಶೆಟ್ಟಿ ಗೌಡರು, ತಾಯಿ ಪಾರ್ವತಮ್ಮ. ಪ್ರಾರಂಭಿಕ ಶಿಕ್ಷಣವನ್ನು ತಮ್ಮಊರಾದ ನಾಗತಿಹಳ್ಳಿಯಲ್ಲಿ ಪಡೆದ ಅವರು ಮುಂದೆ ತಮ್ಮ ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ಪೂರ್ಣಗೊಳಿಸಿದರು. ಸ್ನಾತಕೋತ್ತರ ಪದವಿಯನ್ನು ಹಲವಾರು ಸ್ವರ್ಣಪದಕಗಳೊಂದಿಗೆ ಗಳಿಸಿದ ಚಂದ್ರಶೇಖರ್ ತಮ್ಮ ಗ್ರಾಮ ನಾಗತಿಹಳ್ಳಿಯಲ್ಲಿ ‘ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ’ಯನ್ನು ಆರಂಭಿಸಿದರು. ಜೊತೆಗೆ ಪ್ರತಿ ಯುಗಾದಿಯ ಸಂದರ್ಭದಲ್ಲಿ `ನಾಗತಿಹಳ್ಳಿ ಸಾಂಸ್ಕೃತಿಕ ಹಬ್ಬ’ಕ್ಕೆ ಸಹಾ ಚಾಲನೆ ನೀಡಿದರು. ಈ ವೇದಿಕೆಯ ಮೂಲಕ ಗ್ರಾಮದಲ್ಲಿ ಸುಸಜ್ಜಿತ ಗ್ರಂಥಾಲಯ, ರಂಗಮಂದಿರ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವ ಮೂಲಕ ಗ್ರಾಮೀಣ ಜನರ ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಕೆಲಸವನ್ನು ...

READ MORE

Related Books