ಶೀಲ, ಧರ್ಮ, ಧ್ಯೇಯ ಅಂದು-ಇಂದು

Author : ಕೆ.ಎಸ್‍. ನಾರಾಯಣಾಚಾರ್ಯ

Pages 36

₹ 30.00




Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ ಹುಬ್ಬಳ್ಳಿ

Synopsys

ಹಿರಿಯ ಲೇಖಕ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು ಬರೆದ ಲೇಖನಗಳ ಸಂಗ್ರ ಕೃತಿ-ಶೀಲ, ಧರ್ಮ, ಧ್ಯೇಯ ಅಂದು ಇಂದು. ತೀರಾ ಸಣ್ಣ ಸಣ್ಣ ವಿಷಯಗಳೆಂದು ನಾವು ಬಹುತೇಕ ಸಂಗತಿಗಳನ್ನು ನಿರ್ಲಕ್ಷಿಸುತ್ತೇವೆ. ಆದರೆ, ನಮ್ಮ ಹಿನ್ನೆಡೆ ಇಂತಹ ಸಣ್ಣ ಸಣ್ಣ ಸಂಗತಿಗಳಿಂದಲೇ ಆಗುತ್ತಿರುತ್ತದೆ. ನಮಗಿದು ತಿಳೀಯುವುದೇ ಇಲ್ಲ. ಈ ಹಿನ್ನೆಲೆಯಲ್ಲಿ, ಅತ್ಯಂತ ಸೂಕ್ಷ್ಮವಾಗಿ ಲೇಖನಗಳನ್ನು ಬರೆಯುವ ಮೂಲಕ ಓದುಗರ ಮನದ ಅವಲೋಕನ ನಡೆಯುವಂತೆ ಲೇಖಕರು ಮಾಡಿದ್ದು ಇಲ್ಲಿಯ ವಿಶೇಷ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books