ಷೇರು ಸಾಮ್ರಾಜ್ಯ: ಕಲಿತವನೇ ಅಧಿಪತಿ

Author : ರಂಗಸ್ವಾಮಿ ಮೂಕನಹಳ್ಳಿ

Pages 152

₹ 180.00




Year of Publication: 2022
Published by: ಸಾವಣ್ಣ ಎಂಟರ್‌ಪ್ರೈಸಸ್
Address: #12, ಬೈರಸಂದ್ರ ಮುಖ್ಯರಸ್ತೆ, 1ನೇ ಬ್ಲಾಕ್ ಪೂರ್ವ, 1ನೇ ಬ್ಲಾಕ್, ಜಯನಗರ, ಬೆಂಗಳೂರು-560022

Synopsys

ಷೇರು ಪೇಟೆ ವ್ಯವಹಾರಗಳ ಬರಹಗಾರ ಹಾಗೂ ಹಣಹೂಡಿಕೆಯ ತಜ್ಞ ಸಲಹೆಗಾರ ರಂಗಸ್ವಾಮಿ ಮೂಕನಹಳ್ಳಿ ಅವರ ಕೃತಿ-ಷೇರು ಸಾಮ್ರಾಜ್ಯ ಕಲಿತವನು ಅಧಿಪತಿ. ಷೇರು ಪೇಟೆಯನ್ನು ಮೊದಲ ಬಾರಿಗೆ ಪ್ರವೇಶ ಬಯಸುವ ಆಸಕ್ತರಿಗೆ ಪ್ರಾಥಮಿಕ ಮಾಹಿತಿ ನೀಡುವ ಕೃತಿ ಇದು. ಷೇರು ಪೇಟೆ ಎಂದರೇನು, ಹಣ ತೊಡಗಿಸುವ ಉಳಿದ ವಲಯಗಳಿಗಿಂತ ಷೇರು ಪೇಟೆ ಹೇಗೆ ಭಿನ್ನ, ಹಣ ತೊಡಗಿಸುವಾಗಿನ ಎಚ್ಚರಿಕೆ, ಮುಂಜಾಗ್ರತೆ ಕ್ರಮಗಳು, ಹಾನಿಯ ಅರಿವು ಆಗುತ್ತಿದ್ದಂತೆ ಷೇರು ಪೇಟೆ ವಲಯದಿಂದ ಹೊರ ಬರುವುದು ಹೇಗೆ, ಷೇರು ಪೇಟೆ ಜೂಜಾಟಕ್ಕೆ ಸಮವೇ..? ಇತ್ಯಾದಿ ಪ್ರಾಥಮಿಕ ಮಾಹಿತಿಯನ್ನು ಒಳಗೊಂಡ ಕೃತಿ ಇದು.

About the Author

ರಂಗಸ್ವಾಮಿ ಮೂಕನಹಳ್ಳಿ

ರಂಗಸ್ವಾಮಿ ಮೂಕನಹಳ್ಳಿ ಅವರು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಇರುವ ಗ್ರಾಹಕರಿಗೆ ಹಣ ಹೂಡಿಕೆಯ ತಜ್ಞ. ಸಲಹೆಗಾರರಾಗಿ ವೃತ್ತಿ ನಿರತರು. ಹಲವಾರು ಉದ್ಯಮಗಳಲ್ಲಿ ಸಹ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕನ್ನಡದ ಹಲವು ಪ್ರಮುಖ ಪತ್ರಿಕೆ ನಿಯತಕಾಲಿಕೆಗಳಲ್ಲಿ ಹಣಕಾಸು ವಿಷಯಗಳ ಬಗ್ಗೆ ತ ಅಂಕಣಗಳನ್ನು ನಿಯಮಿತವಾಗಿ ಬರೆಯುತ್ತ ಬಂದಿದ್ದಾರೆ. ಕನ್ನಡ ಮತ್ತು ಸ್ಪಾನಿಷ್ ಭಾಷೆಯ ಸಮಾನಾಂತರ ಗಾದೆಗಳನ್ನು ಗುರುತಿಸಿ ಕೃತಿಯನ್ನು ರಚಿಸಿದ್ದು, ಇದು ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿದೆ. ಹಣಕಾಸಿಗೆ ಸಂಬಂಧಿಸಿದ ಮೂರು ಅಂಕಣ ಗುಚ್ಛಗಳ ಕೃತಿಗಳು ಸಹ ಪ್ರಕಟಗೊಂಡಿವೆ. ‘ಬದುಕಿಗೊಂದು ಆಶಾಭಾವ, ವಿತ್ತ ಜಗತ್ತು ತಿಳಿಯಬೇಕಾದ ವಿಷಯ ಹಲವು ಹತ್ತು’ ಅವರ ...

READ MORE

Related Books