ಶಿವ ಛತ್ರಪತಿ

Author : ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)

Pages 94

₹ 0.00




Year of Publication: 1942
Published by: ಸತ್ಯಶೋಧನ ಪ್ರಕಟನ ಮಂದಿರ
Address: ಕೋಟೆ, ಬೆಂಗಳೂರು

Synopsys

ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಬರೆದ ನಾಟಕ-ಶಿವ ಛತ್ರಪತಿ. ರಘೋಜಿ, ತಾನಾಜಿ, ಜೀಜಾಬಾಯಿ, ಔರಂಗಜೇಬ, ಅಬಾಜಿ, ಕಾಶಿಂಖಾನ್, ಜಯಸಿಂಹ, ರಾಮಸಿಂಹ ಹೀಗೆ ವಿವಿಧ ಪಾತ್ರಗಳ ಮೂಲಕ ಶಿವಾಜಿಯ ಶೌರ್ಯ, ಔರಂಗಜೇಬನೊಂದಿಗಿನ ಯುದ್ಧ ಇತ್ಯಾದಿ ಸನ್ನಿವೇಶ-ಘಟನೆಗಳೊಂದಿಗೆ ಸಾಗುವ ನಾಟಕವು ಶಿವಾಜಿಯ ಇತಿಹಾಸವನ್ನು ಮೆಲುಕು ಹಾಕುತ್ತದೆ.

About the Author

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)
(08 June 1891 - 07 June 1986)

‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ 1891ರ ಜೂನ್ 8ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (1914) ಪಡೆದರು. ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (1914) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ...

READ MORE

Related Books