‘ಶೋಧ’ ಲೇಖಕ ಎನ್.ಎಸ್. ಶ್ರೀಧರಮೂರ್ತಿ ಅವರ ಕಾದಂಬರಿ. ಈ ಕೃತಿಗೆ ಲೇಖಕ ಪುರುಷೋತ್ತಮ ಬಿಳಿಮಲೆ ಬೆನ್ನುಡಿ ಬರೆದ್ದಾರೆ. ಈ ಕಾದಂಬರಿ ಒಂದೇ ಗುಕ್ಕಿಗೆ ಓದಿಸಿಕೊಳ್ಳುತ್ತದೆ. ವೇಗದ ಜೊತೆ ಆಳಕ್ಕಿಳಿದು ನೋಡುವ ಜಾಣತನದೊಂದಿಗೆ ತುಂಟತನವೂ ಸೇರಿಕೊಂಡಿದೆ. ಇದರಿಂದಾಗಿ ಭಾಷೆಗೆ ಲವಲವಿಕೆ ಪ್ರಾಪ್ತಿಸಿದೆ. ಜಡಗಟ್ಟಿದ ಸಮಕಾಲೀನ ಸಂದರ್ಭದಲ್ಲಿ ಇಂದು ಅತ್ಯಂತ ಮಹತ್ವದ ಸಂದರ್ಭದಲ್ಲಿ ಇದು ಅತ್ಯಂತ ಮುಖ್ಯವಾದ ಸಂಗತಿ ಎನ್ನುತ್ತಾರೆ ಪುರುಷೋತ್ತಮ ಬಿಳಿಮಲೆ. ಕೃತಿಯಲ್ಲಿ ಕರ್ಣ, ಕೋಟಿ-ಚೆನ್ನಯ್ಯ ಹೀಗೆ ವಿರುದ್ಧ ದೈವದ ಕತೆಗಳನ್ನು ಮುಖ್ಯ ಕತಾಪ್ರವಾಹಕ್ಕೆ ಜೋಡಿಸಿರುವ ರೀತಿ ಅನನ್ಯವಾಗಿದೆ.
ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು 'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...
READ MORE