ಶ್ರೀಕನಕದಾಸರ ಮೋಹನ ತರಂಗಿಣಿ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 140

₹ 81.00




Year of Publication: 2016
Published by: ಕಮಲಾ ಎಂಟರ್ ಪ್ರೈಸೆಸ್
Address: #281/12, ಮೌನರಾಗ ಗಾಯತ್ರಿ ಬಡಾವಣೆ, ಆದರ್ಶ ನಗರ, ಅರಿಶಿನಕುಂಟೆ-562123, ನೆಲಮಂಗಲ ತಾ. ಬೆಂಗಳೂರು ,
Phone: 08027728149

Synopsys

ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ ಕೃತಿ-ಶ್ರೀ ಕನಕದಾಸರ ಮೋಹನ ತರಂಗಿಣಿ. ಕನಕದಾಸರ ಅತ್ಯುತ್ತಮ ಕೃತಿ ಎಂದು ಪರಿಗಣಿಸಲಾದ ‘ಮೋಹನ ತರಂಗಿಣಿ’ಯನ್ನು ಮಕ್ಕಳಿಗೆ ಸರಳವಾಗಿ ತಿಳಿಯುವ ರೀತಿಯಲ್ಲಿ ಸರಳ ಗದ್ಯರೂಪದಲ್ಲಿ ನೀಡಿದ್ದಾರೆ. ಕೇಶವರ ದಾಸರಾಗಿರುವ ಕನಕದಾಸರು ಭಕ್ತಿಯ ಪರಾಕಾಷ್ಠೆಯಲ್ಲಿ ಬರೆದ ಕೃತಿ. ಧರ್ಮ, ಸಂಸ್ಕೃತಿಯ ಪ್ರತಿಪಾದಕರಾಗಿ ಕನಕದಾಸರು ತಮ್ಮ ವಚನಗಳ ಮೂಲಕ ಸಮಾಜ ಜಾಗೃತಿಯಲ್ಲಿ ಬಹು ಮುಖ್ಯ ಪಾತ್ರವಹಿಸುತ್ತಾರೆ. 

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books