ಶ್ರೀ ರಾಮಾಯಣ ದರ್ಶನಂ ಪಾತ್ರಗಳ ಕಥಾವಳಿ

Author : ಜಿ. ಕೃಷ್ಣಪ್ಪ

Pages 120

₹ 120.00




Year of Publication: 2021
Published by: ವಂಶಿ ಪಬ್ಲಿಕೇಷನ್ಸ್,
Address: #4, ಗಾಯತ್ರಿ ಕಾಂಪ್ಲೆಕ್ಸ್, ಟಿ.ಬಿ ಬಸ್ಸ್ ಸ್ಟಾಪ್ ಹತ್ತಿರ, ಸುಭಾಷ್ ನಗರ, ನೆಲಮಂಗಲ, ಬೆಂಗಳೂರು-562123

Synopsys

ಲೇಖಕ ಡಾ.ಜಿ ಕೃಷ್ಣಪ್ಪ ಅವರ ’ಶ್ರೀರಾಮಾಯಣ ದರ್ಶನಂ ಪಾತ್ರಗಳ ಕಥಾವಳಿ’ ರಾಮಾಯಣ ಪಾತ್ರಗಳ ಕುರಿತ ಮಹಾಕಾವ್ಯವಾಗಿದೆ. ಈ ಕೃತಿಗೆ ಬೆನ್ನುಡಿ ಬರೆದಿರುವ ಟಿ.ಎನ್ ವಾಸುದೇವಮೂರ್ತಿ ಅವರು, ಎಲ್ಲ ಮಹತ್ವದ ಪ್ರಾಚೀನ ಪಠ್ಯಗಳೂ ಕಾಲ ಸರಿದಂತೆ ಸೂತಕಗೊಳ್ಳುತ್ತವೆ, ಮತ್ತಾವುದೋ ಉದ್ದೇಶ, ಹಿತಾಸಕ್ತಿಗಳಿಗೆ ಎರವಾಗುತ್ತಾ ಹೋಗುತ್ತವೆ. ಹಾಗೆಂದು, ಅಂತಹ ಪಠ್ಯಗಳನ್ನು ವಿಸರ್ಜಿಸಲಾಗದು. ಅದು ಪ್ರತಿ ಯುಗಧರ್ಮದಲ್ಲೂ ತತ್ಕಾಲೀನ ಮೌಲ್ಯಗಳಿಗೆ ಅನುಗುಣವಾಗಿ ಹೊಸ ಅವತಾರ ಪಡೆಯುತ್ತಿರುತ್ತದೆ. ’ ಶ್ರೀ ರಾಮಾಯಣ ದರ್ಶನಂ’ ನಮ್ಮ ಯುಗಕ್ಕೆ ಪ್ರಾಪ್ತಿಯಾಗಿರುವ ಅಂತಹ ಒಂದು ಭಾಗ್ಯವಾಗಿದೆ. ಇದರ ಕೆಲವು ಮಹತ್ವದ ಪಾತ್ರಗಳು ಈ ಕೃತಿಯಲ್ಲಿ ತಿಳಿಗನ್ನಡ ರೂಪದಲ್ಲಿ ಸಿಗುತ್ತಿರುವುದು ಹೊಸಕಾಲದ ಓದುಗರ ಸೌಭಾಗ್ಯವಾಗಿದೆ. ಕುವೆಂಪು ಅವರ ಎರಡು ಮಹಾಕಾದಂಬರಿಗಳಲ್ಲಿ ಮಲೆನಾಡ ಬದುಕಿನ ವಿರಾಟ್ ದರ್ಶನವಾದರೆ, ’ಮಲೆನಾಡಿನ ಚಿತ್ರಗಳು’ ಕಿರುಹೊತ್ತಗೆಯಲ್ಲಿ ಆ ವಿಸ್ತಾರ ಬದುಕಿನ ಒಂದು ಕಿರುನೋಟವೇ ಅವರ ಮಹತ್ಕಾದಂಬರಿಗಳೊಂದಿಗೆ ಪ್ರವೇಶಿಸಲು ಸಹೃದಯನನ್ನು ಪ್ರೇರೇಪಿಸುತ್ತದೆ. ಅಂತೆಯೇ ಡಾ. ಜಿ.ಕೃಷ್ಣಪ್ಪನವರ ಒಂಬತ್ತು ಪಾತ್ರಗಳನ್ನು ಒಳಗೊಂಡ ’ ಶ್ರೀರಾಮಾಯಣ ದರ್ಶನಂ ಪಾತ್ರಗಳ ಕಥಾವಳಿ’ಯು ಮಹಾಕಾವ್ಯದ ಒಂದು ಇಣುಕು ನೋಟವನ್ನು ಓದುಗನಿಗೆ ನೀಡುತ್ತದೆ ಎಂದಿದ್ದಾರೆ.

About the Author

ಜಿ. ಕೃಷ್ಣಪ್ಪ

’ಬೇಂದ್ರೆ ಕೃಷ್ಣಪ್ಪ’ ಎಂದೇ ಜನಪ್ರಿಯರಾಗಿರುವ ಡಾ. ಜಿ.ಕೃಷ್ಣಪ್ಪ ಅವರು ಪ್ರಮುಖ ಬೇಂದ್ರ ಸಾಹಿತ್ಯ ಪರಿಚಾರಕರು. ಕೃಷ್ಣಪ್ಪ ಅವರು 1948ರಲ್ಲಿ ಬೆಂಗಳೂರಲ್ಲಿ  ಜನಿಸಿದರು. ತಂದೆ ಹೆಚ್.ಗಂಗಯ್ಯ, ತಾಯಿ ಸಾವಿತ್ರಮ್ಮ. ಜಿ.ಕೃಷ್ಣಪ್ಪ ಅವರು ಬೇರೆ ಕಾವ್ಯದ ಓದಿಗೆ ಹೊಸ ಆಯಾಮ ಪರಿಚಯಿಸಿದವರು. ಬೆಂಗಳೂರಿನ ಎಸ್.ಟಿ. ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ, ವಾಹನ ನಿರೀಕ್ಷಕರಾಗಿ ವೃತ್ತಿಯಾರಂಭಿಸಿದ ಇವರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ನಿವೃತ್ತಿ. ಉದ್ಯೋಗದ ನಡುವೆ ಬಿ.ಎ, ಎಲ್‌ಎಲ್‌ಬಿ, ಕನ್ನಡದಲ್ಲಿ ಸ್ನಾತಕೋತ್ತರ ಪದವೀಧರಾಗಿದ್ದಾರೆ. 'ಬೇಂದ್ರೆ ಸಾಹಿತ್ಯದಲ್ಲಿ ಸ್ತ್ರೀ : ಒಂದು ಅಧ್ಯಯನ ಕುರಿತು ಪಿಎಚ್ಡಿ ಪದವಿಯನ್ನು ಮಾಡಿದ್ದಾರೆ.ಸಾಹಿತ್ಯದ ಓದು, ಬೇಂದ್ರೆ ಕಾವ್ಯದ ಗುಂಗೇ ಇವರ  ಬರವಣಿಗೆಗೆ ...

READ MORE

Related Books