ಶ್ರೀ ಶಂಕರ ದಿಗ್ವಿಜಯ

Author : ಕೌಂಡಿನ್ಯ ನಾಗೇಶ

Pages 185

₹ 80.00




Year of Publication: 2015
Published by: ಶ್ರೀ ರಾಮಕೃಷ್ಣ ಆಶ್ರಮ
Address: ಯಾದವಗಿರಿ, ಮೈಸೂರು

Synopsys

ಸಾಹಿತಿ ಕೌಂಡಿನ್ಯ ನಾಗೇಶ ಅವರ ಕೃತಿ-ಶ್ರೀ ಶಂಕರ ದಿಗ್ವಿಜಯ. ಸಣ್ಣ ವಯಸ್ಸಿನಲ್ಲೇ ಅಪಾರ ಪಾಂಡಿತ್ಯ ಪಡೆದಿದ್ದ ಶ್ರೀ ಶಂಕರರು, ತಮ್ಮ ಅದ್ವೈತ ಸಿದ್ಧಾಂತ ಪ್ರತಿಪಾದನೆ ಮೂಲಕ ಭಾರತಾದ್ಯಂತ ಸಂಚರಿಸಿ, ಜನಸಾಮಾನ್ಯರಲ್ಲಿ ದೇವರ ಕುರಿತ ಇದ್ದ ಹತ್ತು ಹಲವು ಸಂಶಯಗಳನ್ನು ನಿವಾರಿಸಲು ಯತ್ನಿಸಿದರು. ಮನುಷ್ಯನು ಸಹ ದೇವರ ರೂಪವೇ ಎಂದು ಹೇಳಲು ಅವರು ‘ಅಹಂ ಬ್ರಹ್ಮಾಸ್ಮಿ’ ಎಂಬ ಮಂತ್ರ ಘೋಷವನ್ನೇ ನೀಡಿದರು. ಭಾರತದ ನಾಲ್ಕು ದಿಕ್ಕುಗಳಲ್ಲಿ ಮಠಗಳನ್ನು ಸ್ಥಾಪಿಸಿ, ಅದ್ವೈತ ಸಿದ್ದಾಂತ ಪ್ರಚಾರ ಹಾಗೂ ಪ್ರಸಾರಕ್ಕೆ ಶ್ರಮಿಸಿದರು. ಈ ಮಧ್ಯೆ ಹಲವು ಟೀಕೆಗಳನ್ನು ಎದುರಿಸಿದರು. ಇಂತಹ ಸಮಗ್ರ ಸಂಗತಿಗಳನ್ನು ಒಳಗೊಂಡ ಕೃತಿ ಇದು.

About the Author

ಕೌಂಡಿನ್ಯ ನಾಗೇಶ

  ಕೌಂಡಿನ್ಯ   ಕಾವ್ಯನಾಮದಿಂದ  ಪ್ರಸಿಧ್ದಿಯನ್ನು  ಪಡೆದಿರುವ ವೈ.ಎನ್‌ ನಾಗೇಶ್‌ ಅವರು ಮೂಲತಃ ಹಾಸನ ಜಿಲ್ಲೆಯ ಹೊಳೆ ನರಸೀಪುರದವರು . ತಂದೆ ನಾರಾಯಣ ರಾವ್‌ ತಾಯಿ ಜಯಲಕ್ಷ್ಮಿ . ಮೂವತ್ತೆರಡು ವರ್ಷಗಳಿಂದ ಸಾಹಿತ್ಯ ಸೇವೆಯನ್ನು ಮಾಡಿಕೊಂಡಿದ್ದಾರೆ. ಇವರು ಮಂಗಳ, ತರಂಗ, ಸುಧಾ, ಕನ್ನಡ ಪ್ರಭ, ಪ್ರಜಾವಾಣಿ ,ಉದಯವಾಣಿ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ 350 ಕ್ಕೂ ಹೆಚ್ಚು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಕನ್ನಡ ಭಾಷಾ ಸಂಶೋಧನಾ ಕೃತಿ, ಚಾರಿತ್ರಿಕ ಕೃತಿ, ಪೌರಾಣಿಕ ಗ್ರಂಥಗಳು ,ಧಾರ್ಮಿಕ ಮತ್ತು ಸಾಮಾನ್ಯ ಲೇಖನಗಳು, ಸಣ್ಣ ಕತೆಗಳು , ಕವನ ಸಂಕಲನಗಳು,  ಚಲನಚಿತ್ರಗಳು  ರಚಿಸಿದ್ದಾರೆ.   ಪ್ರಶಸ್ತಿ ...

READ MORE

Related Books