ಶ್ರೀ ಶೇಷಾಚಲರು

Author : ತ.ಸು. ಶಾಮರಾಯ

Pages 102

₹ 15.00




Year of Publication: 1978
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವಶಿಲ್ಪ, ಕೆಂಪೇಗೌಡನಗರ, ಬೆಂಗಳೂರು-560019

Synopsys

`ಶ್ರೀ ಶೇಷಾಚಲರು' ಅವರ ಜೀವನಚರಿತ್ರೆಯ ಪುಸ್ತಕವಿದು. ಲೇಖಕ ತ.ಸು. ಶಾಮರಾವ್‌ ಅವರು ರಚಿಸಿದ್ದಾರೆ. ಕನ್ನಡ ನಾಡಿನ ಒಬ್ಬ ಸಂತರು. ಸರಳ, ಶುಭ್ರ ಜೀವನ, ಎಲ್ಲರಲ್ಲಿ ಕರುಣೆ ಇವುಗಳಿಂದ ಜನರ ಮನಸ್ಸನ್ನು ಸೆಳೆದರು. ಸುಂದರ ಜೀವನ, ಧೀರ ಸಾವು ಎಂದು ಶ್ರೀ ಶೇಷಾಚಲರ ಕುರಿತು ಈ ಪುಸ್ತಕದಲ್ಲಿ ವಿವರಿಸಲಾಗಿದೆ. ಶ್ರೀ ಶೇಷಾಚಲರ ಬಾಲ್ಯ ಜೀವನ, ಸಂತ ಪರಂಪರೆಯತ್ತ ಒಲವು, ಜೀವನದ ಪಾಠಗಳು, ಸಮಾಜಕ್ಕೆ ಸಂದೇಶ, ಕೊನೆಯ ದಿನಗಳು ಹೀಗೆ ಹಲವಾರು ಆಯಾಮಗಳಲ್ಲಿ ಲೇಖಕರು ಸರಳ ಕನ್ನಡದಲ್ಲಿ ವಿವರಿಸಿದ್ದಾರೆ.

 

About the Author

ತ.ಸು. ಶಾಮರಾಯ
(12 June 1906 - 21 August 1998)

ತ.ಸು.ಶಾಮರಾಯರು ಕನ್ನಡದ ಪ್ರಮುಖ ಸಾಹಿತಿಗಳು ಮತ್ತು ವಿದ್ವಾಂಸರು. ಇವರು (12-06-1906) ಜನಿಸಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ. ತಂದೆ ಸುಬ್ಬಣ್ಣ ಮತ್ತು ತಾಯಿ ಲಕ್ಷ್ಮಿದೇವಮ್ಮ. ಬಿ.ಎ.ಆನರ್ಸ್ ಪದವಿಯನ್ನು ಚಿನ್ನದ ಪದಕದೊಂದಿಗೆ ಪಡೆದು, ಕಾಲೇಜ್ ಅಧ್ಯಾಪಕರಾದರು. ಕುವೆಂಪು ಮಾರ್ಗದರ್ಶನದಲ್ಲಿ , 'ಕನ್ನಡ ನಾಟಕ ಎಂಬ ಪ್ರಬಂಧ ಮಂಡಿಸಿ ಎಂ.ಎ. ಪದವಿ ಪಡೆದು, ಪ್ರಾಧ್ಯಾಪಕ ವೃತ್ತಿ ಕೈಗೊಂಡರು. ಮೈಸೂರು ವಿ.ವಿ. ಪ್ರಸಾರಾಂಗದ ನಿರ್ದೇಶಕ, ಮಹಾ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ವ್ಯಾಕರಣ ಕೋಶಕ್ಕೆ ಸಂಬಂಧಿಸಿದ ಐದು ಕೃತಿಗಳು, ಕನ್ನಡ ನಾಟಕ, ಜನಪ್ರಿಯ ಕನ್ನಡ ಸಾಹಿತ್ಯ ಚರಿತ್ರೆ, ವಿಮರ್ಶಾ ಗ್ರಂಥಗಳು, ಅಜಿತ ಪುರಾಣ ಸಂಗ್ರಹ, ಅರಣ್ಯ ಪುರಾಣ ಸಂಗ್ರಹ ( ಇದೇ ರೀತಿ 11 ಕಾವ್ಯ ಸಂಗ್ರಹಗಳು), ಮಂಕನ ಮಡದಿ ...

READ MORE

Related Books