ಶ್ರೀಕೃಷ್ಣ ಮತ್ತು ಮಹಾಭಾರತ ಯುದ್ಧ

Author : ಕೆ.ಎಸ್‍. ನಾರಾಯಣಾಚಾರ್ಯ

Pages 112

₹ 75.00

Buy Now


Year of Publication: 2015
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 08362367676

Synopsys

ಧಾರ್ಮಿಕ ಚಿಂತಕ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು ಬರೆದ ಕೃತಿ-ಶ್ರೀಕೃಷ್ಣ ಮತ್ತು ಮಹಾಭಾರತ ಯುದ್ಧ. ಮಹಾಭಾರತ ಯುದ್ಧಕ್ಕೆ ಕಾರಣೀಕರ್ತನೂ, ಯುದ್ಧನಿಲ್ಲಿಸುವವನೂ ಅವನೇ ಆಗಿದ್ದಾನೆ. ಆದರೆ, ಅವರವರ ಕರ್ಮಕ್ಕೆ ಅನುಸಾರವಾಗಿ ಪ್ರತಿಯೊಬ್ಬರೂ ತಮ್ಮ ಪಾತ್ರ ನಿರ್ವಹಿಸುವ ಅಗತ್ಯವಿದ್ದ ಪ್ರಯುಕ್ತ ಯುದ್ಧ ಅನಿವಾರ್ಯವಾಗುತ್ತದೆ. ಅಂದರೆ, ಏನೇನು ಸಂಭವಿಸಬೇಕಿತ್ತೋ ಅದೆಲ್ಲವೂ ಸಂಭವಿಸುತ್ತವೆ. ಇಂತಹ ನೀತಿಯಿಂದ, ವಿಶ್ವದ ಈ ಪರಿಚಲನೆಯು ಒಂದು ನಿರ್ದಿಷ್ಟ ಉದ್ದೇಶ ಹೊಂದಿದೆ. ಅದು ಪೂರ್ಣಗೊಳ್ಳಲು ನಿರ್ದಿಷ್ಟ ಚಟುವಟಿಕೆಯನ್ನು ಅವಲಂಬಿಸಿರುತ್ತದೆ ಎಂಬ ಸತ್ಯವನ್ನು ನಿರೂಪಿಸುವ ಕೃತಿಯು, ಓದುಗರನ್ನು ಸೆಳೆಯುತ್ತದೆ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books