ಶ್ರೀಕೃಷ್ಣಾವತಾರ ಪೂರ್ವಾರ್ಧ, ಶ್ರೀಕೃಷ್ಣಾವತಾರ ಉತ್ತರಾರ್ಧ

Author : ಕೆ.ಎಸ್‍. ನಾರಾಯಣಾಚಾರ್ಯ

₹ 950.00

Buy Now


Year of Publication: 2019
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 08362367676

Synopsys

ಶ್ರೀಕೃಷ್ಣಾವತಾರದ ಪೂರ್ವಾರ್ಧ ಹಾಗೂ ಉತ್ತರಾರ್ಧ ಅವಧಿಯಲ್ಲಿ ಜರುಗಿದ ವಿವರಗಳನ್ನು ಒಳಗೊಂಡ ಎರಡು ಪ್ರತ್ಯೇಕ ಕೃತಿಗಳು ಇಲ್ಲಿವೆ. ಕೃತಿಗಳ ಕರ್ತೃ ಪ್ರೊ. ಕೆ.ಎಸ್. ನಾರಾಯಣಾಚಾರ್ಯ. ಶ್ರೀ ಕೃಷ್ಣನು ಸರ್ವಾಂತರ್ಯಾಮಿ. ಆತನಿಗೆ ಹುಟ್ಟು ಇಲ್ಲ; ಸಾವೂ ಇಲ್ಲ. ವಿಶ್ವದ ಪ್ರತಿ ಸೂಕ್ಷ್ಮ ಚಟುವಟಿಕೆಯೂ ಆತನ ಮನವನ್ನು ಅವಲಂಬಿಸಿದೆ. ಆದರೂ, ದಶಾವತಾರಗಳ ಪೈಕಿ ಶ್ರೀಕೃಷ್ಣಾವತಾರವೂ ಒಂದು. ಇದರ ಪೂರ್ವಾರ್ಧ ಹಾಗೂ ಉತ್ತರಾರ್ಧ ಅವಧಿಯ ಚಟುವಟಿಕೆಗಳನ್ನು ವಿಶ್ಲೇಷಿಸುವ ಮೂಲಕ ಶ್ರೀಕೃಷ್ಣನ ಅನಂತ ರೂಪವನ್ನು ಕಾಣುವ ಹಾಗೂ ತೋರುವ ಪ್ರಯತ್ನ ಕೃತಿಯಲ್ಲಿ ಕಾಣಬಹುದು.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books