ಸಿಂಹಾವಲೋಕನ

Author : ಎನ್.ಎಸ್. ಶ್ರೀಧರಮೂರ್ತಿ

Pages 156

₹ 150.00




Year of Publication: 2017
Published by: ಕರ್ನಾಟಕ ಚಲನಚಿತ್ರ ಅಕಾಡಮಿ
Address: 20 / ಎ, ವೃತ್ತಾಕಾರದ ರಸ್ತೆ, ಎಂಐಜಿ ಬ್ಲಾಕ್, ಪ್ರೆಸಿಡೆನ್ಸಿ ಶಾಲೆಯ ಹತ್ತಿರ, ನಂದಿನಿ ಲೇಔಟ್, ಬೆಂಗಳೂರು 560096

Synopsys

ಕನ್ನಡ ಚಿತ್ರರಂಗದ ದಿಗ್ಗಜ ನಟ ವಿಷ್ಣುವರ್ಧನ್, ಕರುನಾಡಿಗರಿಗೆ ಸಿಂಹ ಎಂದೇ ಪ್ರಸಿದ್ಧರು. ಅವರ ಸರಳ ವ್ಯಕ್ತಿತ್ವ, ಸ್ನೇಹಪರತೆ, ವೃತ್ತಿ ಜೀವನದೊಂದಿಗೆ ಇದ್ದ ಬೆಸುಗೆ, ಚಿತ್ರರಂಗದವರೊಂದಿಗಿನ ಒಡನಾಟ ಇವುಗಳನ್ನು ಹೆಕ್ಕಿರುವ ಸುಂದರ ಕೃತಿ ‘ಸಿಂಹಾವಲೋಕನ’. ಲೇಖಕ ಎನ್. ಎಸ್. ಶ್ರೀಧರ ಮೂರ್ತಿ ಅವರು ರಚಿಸಿದ್ದಾರೆ. 

 

About the Author

ಎನ್.ಎಸ್. ಶ್ರೀಧರಮೂರ್ತಿ
(24 August 1968)

ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು  'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...

READ MORE

Related Books