ಸಿರಿವಂತಿಕೆಗೆ ಸರಳ ಸೂತ್ರಗಳು

Author : ರಂಗಸ್ವಾಮಿ ಮೂಕನಹಳ್ಳಿ

Pages 152

₹ 180.00




Year of Publication: 2023
Published by: ಸಾವಣ್ಣ ಎಂಟರ್‌ಪ್ರೈಸಸ್‌
Address: ಸಾವಣ್ಣ ಎಂಟರ್‌ಪ್ರೈಸಸ್‌, ನಂ. 12, ಭೈರಸಂದ್ರ ಮುಖ್ಯರಸ್ತೆ, ಜಯನಗರ 1ನೇ ಬ್ಲಾಕ್‌ ಪೂರ್ವ, ಬೆಂಗಳೂರು-560011
Phone: 080-41229757/ 9036312786

Synopsys

’ಸಿರಿವಂತಿಕೆಗೆ ಸರಳ ಸೂತ್ರಗಳು’ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದ ಲೇಖನಗಳ ಸಂಗ್ರಹವಾಗಿದೆ. ಕೃತಿಯಲ್ಲಿ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆಯುತ್ತಾ,’ನಾನು ಅತ್ಯಂತ ಇಷ್ಟಪಡುವ ವ್ಯಕ್ತಿ ಲೀ ಕ ಶಿಂಗ್‌ ಹೇಳುತ್ತಾರೆ: ಬದುಕು, ಭವಿಷ್ಯ, ಸಂತೋಷ, ಶ್ರೀಮಂತಿಕೆ ಎಲ್ಲವನ್ನೂ ಪ್ಲಾನ್‌ ಮಾಡಬಹುದು! ನನ್ನ ಮೇಲೆ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ ಇವರು. ಅವರ ಪ್ರಕಾರ, Life can be designed. Careers can be planned. Happiness can be prepared. ಅಬ್ಬಾ ಅದೆಂತಹ ಸಾಲುಗಳು! ಅದೆಂತಹ ಆತ್ಮಶಕ್ತಿ! ಅದೆಂತಹ ವಿಶ್ವಾಸ! ಅದೆಷ್ಟು ನಂಬಿಕೆ ಅಲ್ವಾ? ಇಂದಿಗೆ 95ರ ಲೀ ಕ ಶಿಂಗ್‌ 15ನೇ ವಯಸ್ಸಿಗೆ ಶಾಲೆ ಬಿಟ್ಟು ದಿನಕ್ಕೆ 16 ತಾಸು ದುಡಿಯಲು ಶುರು ಮಾಡಿದವರು. ನಿಮಗೆಲ್ಲಾ ಗೊತ್ತಿರಲಿ ಜಗತ್ತಿನ ಮಿಲಿಯನೇರ್‌ ಮತ್ತು ಬಿಲಿಯನೇರ್‌ಗಳಲ್ಲಿ 85 ಪ್ರತಿಶತ ಸೆಲ್ಫ್ ಮೇಡ್‌. ಅವರಿಗೂ ನಿಮ್ಮಂತೆ, ನನ್ನಂತೆ ಫ್ಯಾಮಿಲಿ, ಸಂಪತ್ತು ಅಥವಾ ಗಾಡ್‌ಫಾದರ್‌ ಇರಲಿಲ್ಲ. ಇಂದಿಗೆ ಅವರು ಹಾಂಗ್‌ ಕಾಂಗ್‌ನ ಅತಿ ದೊಡ್ಡ ಶ್ರೀಮಂತರಲ್ಲಿ ಒಬ್ಬರು! ಜಾಗತಿಕ ಮಟ್ಟದಲ್ಲೂ ಅತಿ ದೊಡ್ಡ ಶ್ರೀಮಂತರ ಸಾಲಿನಲ್ಲಿ ನಿಲ್ಲುತ್ತಾರೆ. ಅವರಿಗೆ ಸಾಧ್ಯವಾದರೆ ಅದು ನಮಗೂ ಸಾಧ್ಯ. ಇಂದಿಗೆ ಶ್ರೀಮಂತಿಕೆಗೆ ಲೀ ಕ ಶಿಂಗ್‌ ಮಾಡೆಲ್‌ ಅತ್ಯಂತ ಸೂಕ್ತವಾಗಿದೆ. ಏನಿದು ಲೀ ಕ ಶಿಂಗ್‌ ಮಾಡೆಲ್‌ ಎನ್ನುವುದರ ಬಗ್ಗೆ ಪುಸ್ತಕದಲ್ಲಿ ವಿವರವಿದೆ’ ಎಂದಿದ್ದಾರೆ. 

About the Author

ರಂಗಸ್ವಾಮಿ ಮೂಕನಹಳ್ಳಿ

ರಂಗಸ್ವಾಮಿ ಮೂಕನಹಳ್ಳಿ ಅವರು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಇರುವ ಗ್ರಾಹಕರಿಗೆ ಹಣ ಹೂಡಿಕೆಯ ತಜ್ಞ. ಸಲಹೆಗಾರರಾಗಿ ವೃತ್ತಿ ನಿರತರು. ಹಲವಾರು ಉದ್ಯಮಗಳಲ್ಲಿ ಸಹ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕನ್ನಡದ ಹಲವು ಪ್ರಮುಖ ಪತ್ರಿಕೆ ನಿಯತಕಾಲಿಕೆಗಳಲ್ಲಿ ಹಣಕಾಸು ವಿಷಯಗಳ ಬಗ್ಗೆ ತ ಅಂಕಣಗಳನ್ನು ನಿಯಮಿತವಾಗಿ ಬರೆಯುತ್ತ ಬಂದಿದ್ದಾರೆ. ಕನ್ನಡ ಮತ್ತು ಸ್ಪಾನಿಷ್ ಭಾಷೆಯ ಸಮಾನಾಂತರ ಗಾದೆಗಳನ್ನು ಗುರುತಿಸಿ ಕೃತಿಯನ್ನು ರಚಿಸಿದ್ದು, ಇದು ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿದೆ. ಹಣಕಾಸಿಗೆ ಸಂಬಂಧಿಸಿದ ಮೂರು ಅಂಕಣ ಗುಚ್ಛಗಳ ಕೃತಿಗಳು ಸಹ ಪ್ರಕಟಗೊಂಡಿವೆ. ‘ಬದುಕಿಗೊಂದು ಆಶಾಭಾವ, ವಿತ್ತ ಜಗತ್ತು ತಿಳಿಯಬೇಕಾದ ವಿಷಯ ಹಲವು ಹತ್ತು’ ಅವರ ...

READ MORE

Related Books