ಸೋಮನಾಥಪುರ

Author : ಷ. ಶೆಟ್ಟರ್‌

Pages 168

₹ 450.00




Year of Publication: 2008
Published by: ಅಭಿನವ ಪ್ರಕಾಶನ
Address: 17/18-2, ಮೊದಲನೆ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು- 560040
Phone: 9448804905

Synopsys

‘ಸೋಮನಾಥಪುರ’ ಸಂಶೋಧಕ ಷ. ಶೆಟ್ಟರ್ ಅವರ ಕೃತಿ. ಪ್ರೌಢ ಓದುಗ ಅಥವಾ ಸಂದರ್ಶಕ ಸೋಮನಾಥಪುರದ ಬಗ್ಗೆ ತಿಳಿದುಕೊಳ್ಳಲು ಬೇಕಾದ ಮಾಹಿತಿ ಒದಗಿಸುವುದು ಈ ಗ್ರಂಥದ ಉದ್ದೇಶ.

ಹೊಯ್ಸಳರ ಮತ್ತು ಅವರ ದೇವಾಲಯಗಳ ಪ್ರಸ್ತಾವನೆಯಿಂದ ಪ್ರಾರಂಭವಾಗಿ ಇಲ್ಲಿಯ ದೇವಾಲಯಗಳ ಇತಿಹಾಸ, ಐತಿಹ್ಯ, ಪೋಷಕ, ವಾಸ್ತು-ಶಿಲ್ಪಿ ಇತ್ಯಾದಿ ಚರ್ಚಿಸುತ್ತಾ, ವಾಸ್ತು, ಶಿಲ್ಪ, ಅರ್ಚನೆ, ಆರ್ಥಿಕ ವ್ಯವಸ್ಥೆಗಳ ಬಗೆಗಿನ ಚಿತ್ರವೊಂದನ್ನು ಒದಗಿಸಿಕೊಡಲಾಗಿದೆ.

ಪ್ರಧಾನ ದೇವತೆಗಳ ಪಾಕಶಾಲೆ, ವಸ್ತ್ರಾಭರಣ ಭಂಡಾರ ಮತ್ತು ಮನರಂಜಕ ಬಳಗಗಳ ಬಗ್ಗೆ ಒಳನೋಟಗಳನ್ನು ಕೊಡಲಾಗಿದೆ. ಹೊಯ್ಸಳರ ಆಳ್ವಿಕೆಯ ಕಾಲದಲ್ಲಿ ಕಟ್ಟಿದ ಅತ್ಯಂತ ಸುಂದರ ದೇವಾಲಯಗಳಲ್ಲಿ ಕೊನೆಯದೂ ಅಳಿದುಳಿದ ಈ ಶೈಲಿಯ ವಿಷ್ಣು ತ್ರಿಕೂಟಗಳಲ್ಲಿ ಅದ್ಭುತವಾದದೂ ಎಂಬ ಹಿರಿಮೆ ಕೇಶವ ದೇವಾಲಯದ್ದು. ವಾಸ್ತು ಶಿಲ್ಪಿಗಳ ಬಗ್ಗೆ ಈ ದೇವಾಲಯ ಒದಗಿಸುವ ವಿವರಗಳನ್ನು ಸರಿಗಟ್ಟುವ ಮಾಹಿತಿ ನಮ್ಮ ದೇಶದ ಮಧ್ಯಕಾಲೀನ ದೇವಾಲಯಗಳಲ್ಲೆಲ್ಲೂ ಕಾಣಸಿಗುವುದಿಲ್ಲ. ಐದು ಬಗೆಯಲ್ಲಿ ಅಕ್ಷರ ಸಂಯೋಜನೆ ಮಾಡಿ ಅರವತ್ತಕ್ಕಿಂತ ಹೆಚ್ಚು ಬಾರಿ ಸಹಿ ಮಾಡಿರುವ ಕೇಶವ ದೇವಾಲಯದ ಶಿಲ್ಪಿಯೊಬ್ಬ ಭಾರತೀಯ ಕಲಾ ಇತಿಹಾಸದಲ್ಲಿ ದಾಖಲೆಯೊಂದನ್ನು ನಿರ್ಮಿಸಿ, ಆ ಮೂಲಕ ತನ್ನ ಹೆಸರನ್ನು ಚಿರಸ್ಥಾಯಿ ಮಾಡಿಕೊಂಡಿರುವನು. ಇದರ ಪರಿಣಾಮ ಅಲ್ಪಮಟ್ಟಿನದಲ್ಲ. ಏಕೆಂದರೆ ಭಾರತೀಯ ಕಲೆ ಅನಾಮಧೇಯ ಮತ್ತು ಭಾರತೀಯ ಶಿಲ್ಪಿಗಳಿಗೆ ವೈಯಕ್ತಿಕತೆಯನ್ನು ಪ್ರತಿಪಾದಿಸಿಕೊಳ್ಳುವುದರ ಬಗ್ಗೆ ಅನಾಸಕ್ತಿ ಎಂಬ ವ್ಯಾಪಕ ನಂಬಿಕೆಯನ್ನು ಇದು ಅಲ್ಲಗೆಳೆಯುವುದು.

ಇಷ್ಟೇ ಕುತೂಹಲಕರವಾದ ಮತ್ತೊಂದು ವಿಶೇಷತೆ ಈ ಅಗ್ರಹಾರದ ಸಂಸ್ಥಾಪಕನು ತಾನು ಶೂದ್ರನೆಂದು ಸ್ಪಷ್ಟವಾಗಿ ಸಾರಿಕೊಂಡಿರುವುದು. ಸಂಸ್ಕೃತ ಶಬ್ದ ಸಂಪದವನ್ನು ಸಮರ್ಥವಾಗಿ ಬಳಸಿಕೊಂಡು ಸೂಕ್ಷ್ಮ ತೆರೆಯನ್ನೆಳೆಯಲು ಈ ಶೂದ್ರನನ್ನು ಬ್ರಹ್ಮಪಾದಪುತ್ರನೆಂದು ಚತುರ ಕವಿಯೊಬ್ಬ ಬಣ್ಣಿಸಿರುವುದು ಮತ್ತೊಂದು ವಿಶೇಷ.

ಎಂಬತ್ತೆರಡು ಸುಂದರ ವರ್ಣಚಿತ್ರ ಮತ್ತು ಬಾಹ್ಯಾಕಾಶ ನೌಕೆಗಳಿಂದ ಪಡೆದ ಅಪೂರ್ವ ದೃಶ್ಯಗಳ ಸಹಾಯದಿಂದ ಸೋಮನಾಥಪುರದ ಗತ ಇತಿಹಾಸವನ್ನು ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ತೆರೆದಿಟ್ಟಿರುವುದು ಇಲ್ಲಿಯ ವಿಶೇಷತೆ.

About the Author

ಷ. ಶೆಟ್ಟರ್‌
(11 December 1935)

ಷ.ಶೆಟ್ಟರ್ ಅವರು ಹುಟ್ಟಿದ್ದು 11 ಡಿಸೆಂಬರ್ 1935 ರಂದು. ಊರು ಬಳ್ಳಾರಿ ಜಿಲ್ಲೆಯ ಹಂಪಸಾಗರ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ಗಳಲ್ಲಿ ಉನ್ನತ ವ್ಯಾಸಂಗ, ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕುರಿತು 27ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳ ಪ್ರಕಟಣೆ. ವಿವಿಧ ವಿಶ್ವವಿದ್ಯಾಲಯದಲ್ಲಿ ಬೋಧನೆ. 1960 -96, ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ 1978-95, ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಅಧ್ಯಕ್ಷ ಸ್ಥಾನ-1996-99, ಬೆಂಗಳೂರಿನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ.ಎಸ್.ರಾಧಾಕೃಷ್ಣನ್ ಪ್ರಾಧ್ಯಾಪಕತ್ವ 2002-2010, ...

READ MORE

Related Books