ಸೋತು ಗೆದ್ದವಳು-ತ್ರಿವೇಣಿ ಅವರ ಕಾದಂಬರಿ. 1954ರಲ್ಲಿ ಮೊದಲ ಮುದ್ರಣ ಕಂಡಿತ್ತು. ಮನುಷ್ಯನು ದುರ್ಬಲ. ಸನ್ನಿವೇಶಗಳಿಗೆ ಮನೋದೌರ್ಬಲಕ್ಕೆ ಬಲಿಯಾಗಿ ಹಲವು ಬಾರಿ ಅವನು ಕಾಲು ಜಾರುವುದುಂಟು. ಹಾಗೆ ಎಡವಿ, ಮತ್ತೆ ಎಚ್ಚೆತ್ತ ದಂಪತಿಯ ಜೀವನವನ್ನು ಚಿತ್ರಿಸಲು ಪ್ರಯತ್ನಿಸಲಾಗಿದೆ ಎಂದು ಕೃತಿಯ ಪ್ರಸ್ತಾವನೆಯಲ್ಲಿ ಲೇಖಕಿ ತ್ರಿವೇಣಿ ಸ್ಪಷ್ಟಪಡಿಸಿದ್ದಾರೆ. ಸಂಸಾರದಲ್ಲಿ ಆಕ್ರೋಶಕ್ಕಿಂತ ಸಹಾನುಭೂತಿ-ಕರುಣೆ ಇರಬೇಕು ಎಂಬುದು ಕಾದಂಬರಿಯ ಆಶಯವಾಗಿದೆ.
ಮನಸ್ಸಿನ ಕ್ರಿಯೆಗಳಿಗೆ ಕಥಾರೂಪ ನೀಡಿ ಕಾದಂಬರಿಗಳನ್ನು ರಚಿಸಿದ್ದು ತ್ರಿವೇಣಿ ಅವರ ಹೆಗ್ಗಳಿಕೆ. ಇವರು 1928 ರ ಸೆಪ್ಟಂಬರ್ 1 ರಂದು ಮೈಸೂರಿನಲ್ಲಿ ಜನಿಸಿದರು. ಮನಸ್ಸಿನ ಭಾವನೆಗಳನ್ನೂ ಚಿತ್ರಿಸಿ ಬರೆದ ಇವರು ರಚಿಸಿದ ಪ್ರಮುಖ ಕಾದಂಬರಿಗಳೆಂದರೆ- ಹೂವು ಹಣ್ಣು, ಅಪಸ್ವರ, ಅಪಜಯ, ಸೋತುಗೆದ್ದವಳು, ಬೆಕ್ಕಿನಕಣ್ಣು, ಶರಪಂಜರ, ದೂರದ ಬೆಟ್ಟ, ಅಪಜಯ, ಕಂಕಣ, ಮುಚ್ಚಿದ ಬಾಗಿಲು, ಬಾನು ಬೆಳಗಿತು, ಅವಳ ಮನೆ, ವಸಂತಗಾನದಿಂದ ಹಿಡಿದು ಬೆಳ್ಳಿಮೋಡದವರೆಗೆ ಸುಮಾರು 20 ಕಾದಂಬರಿಗಳನ್ನು ಹಾಗೂ 3 ಕತಾ ಸಂಕಲನಗಳನ್ನು ರಚಿಸಿದ್ದಾರೆ. ಇವರ ಬೆಳ್ಳಿಮೋಡ, ಶರಪಂಜರ, ಹಣ್ಣಲೆ ಚಿಗುರಿದಾಗ ಕಾದಂಬರಿಗಳು ಚಲನಚಿತ್ರವಾಗಿಯೂ ಅಪಾರ ಜನಮನ್ನಣೆ ಗಳಿಸಿವೆ. ಇವರಿಗೆ ಕರ್ನಾಟಕ ರಾಜ್ಯಪ್ರಶಸ್ತಿ – 'ಅವಳ ಮನೆ' ...
READ MORE