ಶ್ರೀವತ್ಸ ನಿಘಂಟು

Author : ಟಿ.ವಿ. ವೆಂಕಟಾಚಲಶಾಸ್ತ್ರೀ

Pages 400

₹ 150.00




Year of Publication: 2009
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಸಂಖ್ಯಾ ವಿಶಿಷ್ಠ ಪದಗಳನ್ನು ವಿವರಿಸುವ ಕೋಶ ಶ್ರೀವತ್ಸ ನಿಘಂಟು. ಸಂಖ್ಯಾ ವಿಶಿಷ್ಟ ಪದಗಳು ವಿಷಯ ಪ್ರತಿಪಾದನೆಯ ಮಿತವ್ಯಯಾಕಾಂಕ್ಷೆ ಮತ್ತು ಸೂತ್ರೀರಣ ವಿಧಾನಗಳ ಫಲವಾಗಿ ಬಂದಿರುತ್ತವೆ. ಸಾಹಿತ್ಯ, ಕಲೆ, ಧರ್ಮ, ತತ್ವಶಾಸ್ತ್ರ, ರಾಜ್ಯಶಾಸ್ತ್ರ, ವೈದ್ಯಶಾಸ್ತ್ರ, ವ್ಯವಹಾರ ಮುಂತಾದ ಹಲವಾರು ಸಾಹಿತ್ಯ ಪ್ರಕಾರಗಳಲ್ಲಿ ಸಂಖ್ಯಾ ವಿಶಿಷ್ಠ ಪದಗಳು ಇರುತ್ತವೆ. ಈ ಕೃತಿ ಅಧ್ಯಯನಕ್ಕೆ ಅತ್ಯಮೂಲ್ಯವಾಗಿದ್ದು ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ. 

About the Author

ಟಿ.ವಿ. ವೆಂಕಟಾಚಲಶಾಸ್ತ್ರೀ
(26 August 1933)

ಸಂಶೋಧಕ, ಪ್ರಾಧ್ಯಾಪಕ ಟಿ.ವಿ.ವೆಂಕಟಾಚಲ ಶಾಸ್ತ್ರೀ ಅವರು ಕನ್ನಡ ಭಾಷೆಯನ್ನು ಶ್ರೀಮಂತಿಕೆ ಹೆಚ್ಚಿಸಿದವರು. ಶಾಸ್ತ್ರಿಗಳು,1933ರ ಆಗಸ್ಟ್ 26 ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು.  ತಂದೆ ವೆಂಕಟಸುಬ್ಬಾಶಾಸ್ತ್ರಿಗಳು. ತಾಯಿ ಸುಬ್ಬಮ್ಮ. ಎಂ.ಎ. ಮತ್ತು ಪಿಎಚ್.ಡಿ. ಪದವಿ ಪಡೆದ ನಂತರ ವೆಂಕಟಾಚಲ ಶಾಸ್ತ್ರಿಗಳು ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವೃತ್ತಿಯನ್ನು ಮಾಡಿ, ನಂತರ, ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು. ಕನ್ನಡ ನಿಘಂಟು ರಚನಾ ಸಮಿತಿಯ ಸಂಪಾದಕ ಸಮಿತಿಯ ಸದಸ್ಯರಾಗಿದ್ದ ಅವರು ನಂತರ ನಿಘಂಟು ಪರಿಷ್ಕರಣ ಸಮಿತಿ ಪ್ರಧಾನ ಸಂಪಾದಕರಾಗಿದ್ದರು. ವ್ಯಾಕರಣ, ಛಂದಸ್ಸು, ...

READ MORE

Related Books