ಸುಡುಗಾಡು ಸಿದ್ದರು

Author : ಗವೀಶ ಹಿರೇಮಠ

Pages 82

₹ 50.00




Year of Publication: 2007
Published by: ಬಿ.ಎನ್‌.ಪರಡ್ಡಿ
Address: ರಿಜಿಸ್ಟಾರ್‌, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು

Synopsys

ಊರ ಹೊರಗಡೆ ಗುಡಿಸಲು ಹಾಕಿಕೊಂಡು ಊರಿಂದ ಊರಿಗೆ ಅಲೆದಾಡುತ್ತಾ ಕಲೆ ಪ್ರದರ್ಶನ ಮಾಡುತ್ತಾ ಬದುಕುವ ಸುಡುಗಾಡು ಸಿದ್ದ ಸಮುದಾಯದ ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಬದುಕಿನ ಕುರಿತ ವಿಶ್ಲೇಷಣಾ ಕೃತಿ ಇದಾಗಿದೆ. ಈ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಇವರ ಅಲೆಮಾರಿ ಬದುಕಿನ್ನು ನೆಲೆಕಂಡಿಲ್ಲ. ಅದಕ್ಕೆ ಕಾರಣಗಳೇನು? ಮುಂತಾದ ವಿಷಯಗಳ ಕುರಿತು ವಿವರಿಸಿರುವ ಕೃತಿ ಇದಾಗಿದೆ. 

About the Author

ಗವೀಶ ಹಿರೇಮಠ
(08 September 1946 - 13 August 2020)

ಲೇಖಕ ಗವೀಶ ಹಿಮಠ ಅವರು ಮೂಲತಃ ಕೊಪ್ಪಳ ಜಿಲ್ಲೆಯ ಬಿಸರಹಳ್ಳಿ ಗ್ರಾಮದವರು. ಪುರಾಣ ಪ್ರವಚನಕಾರ ವೀರಭದ್ರಯ್ಯ-ಪಾರ್ವತಮ್ಮ ದಂಪತಿಯ ಪುತ್ರರು. 08.09.1946 ರಂದು ಜನನ. ಓದಿದ್ದು ಕೊಪ್ಪಳ, ಧಾರವಾಡದಲ್ಲಿ. ಗುಲ್ಬರ್ಗ ವಿ.ವಿ. ಯ ಗ್ರಂಥಾಲಯದ ಪ್ರ.ಸಹಾಯಕರಾಗಿ ನಿವೃತ್ತರಾಗಿದ್ದರು. ಕಳೆದ 50 ವರ್ಷಗಳಿಂದ ಕಲಬುರಗಿಯಲ್ಲೇ ವಾಸವಾಗಿದ್ದರು.  ಜಾಗತೀಕರಣ ಮತ್ತು ಜಾನಪದ. ಡಾ.ಬಿ.ಎಸ್. ಗದ್ದಗಿಮಠ: ಬದುಕು ಬರಹ. ರಂಗಭೂಮಿ ಜೀವ-ಜೀವಾಳ ಶ್ರೀಧರ ಹೆಗಡೆ ಮುಂತಾದ ಕೃತಿಗಳನ್ನು ರಚಿಸಿದ್ದಾರೆ.  ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ರಂಗಕನಸುಗಳು (1989-90) ಹಾಗೂ ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ ರಂಗಾಂತರಂಗ  ((2003-04) ಶೀರ್ಷಿಕೆಗಳಡಿ ರಂಗಭೂಮಿ ಕುರಿತು ಅಂಕಣಗಳನ್ನು ಬರೆದು ರಂಗಕರ್ಮಿಗಳನ್ನು ಪರಿಚಯಿಸಿದರು. ಇವರ ಕಲಾವಿದರು ನಡೆದು ಬಂದ ...

READ MORE

Related Books