ಸುಪ್ರಸಿದ್ಧ ಭಾಷಣಗಳು; ಡಾ. ಬಾಬಾಸಾಹೇಬ ಅಂಬೇಡ್ಕರ್

Author : ಸರಜೂ ಕಾಟ್ಕರ್‌

Pages 144

₹ 108.00




Year of Publication: 2014
Published by: ಯಾಜಿ ಪ್ರಕಾಶನ
Address: ಭೂಮಿ, ಎಂ.ಪಿ. ಪ್ರಕಾಶ್ ನಗರ, ಹೊಸಪೇಟೆ, ಬಳ್ಳಾರಿ- 583201
Phone: 9481042400

Synopsys

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಮರಾಠಿಯಲ್ಲಿ ಮಾಡಿರುವ ಆಯ್ದ ಸುಪ್ರಸಿದ್ಧ ಭಾಷಣಗಳನ್ನು ಲೇಖಕ ಡಾ. ಸರಜೂ ಕಾಟ್ಕರ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಭಾಷಣಗಳಲ್ಲಿ ಆಡಳಿತ ವೈಖರಿಯ ಟೀಕೆ, ಉತ್ತಮ ಆಡಳಿತದ ಆಶಯ, ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂಬ ಅಂಶ, ಧರ್ಮ ಪ್ರಮುಖವಾಗದೇ ಸಂವಿಧಾನವೇ ಮುಖ್ದವಾಗಬೇಕು ಎಂಬ ವಿಚಾರ ಇತ್ಯಾದಿ ಪ್ರಖರ ವಿಚಾರಗಳನ್ನು ಈ ಭಾಷಣಗಳು ಒಳಗೊಂಡಿದ್ದು, ಕನ್ನಡದ ಓದುಗರೂ ತಿಳಿಯಲು ಅನುಕೂಲವಾಗುವಂತೆ ಈ ಕೃತಿಯು ಮೂಡಿಬಂದಿದೆ.

About the Author

ಸರಜೂ ಕಾಟ್ಕರ್‌
(14 August 1953)

ವೃತ್ತಿಯಲ್ಲಿ ಪತ್ರಕರ್ತರು ಆಗಿರುವ ಕವಿ ಸರಜೂ ಕಾಟ್ಕರ್ ಅವರು ಜನಿಸಿದ್ದು (1953 ಆಗಸ್ಟ್‌ 14ರಂದು) ಹುಬ್ಬಳ್ಳಿಯಲ್ಲಿ . ತಂದೆ ಹಣಮಂತರಾವ್, ತಾಯಿ ಗೌರಾಬಾಯಿ.  ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ (ಕನ್ನಡ) ಪದವೀಧರರು.ಕರ್ನಾಟಕ ವಿ.ವಿ.ಯಿಂದ ‘ಕನ್ನಡ-ಮರಾಠಿ ದಲಿತ ಸಾಹಿತ್ಯ: ಒಂದು ಅಧ್ಯಯನ’ ವಿಷಯವಾಗಿ (1994) ಪಿಎಚ್ ಡಿ ಪಡೆದರು. ಸಂಯುಕ್ತ ಕರ್ನಾಟಕದಲ್ಲಿ ವರದಿಗಾರರಾಗಿ ವೃತ್ತಿ ಆರಂಭಿಸಿ, ನಂತರ ಇಂಡಿಯನ್‌ ಎಕ್ಸ್‌ಪ್ರೆಸ್‌ ಬಳಗದ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರು ಸೇರಿದಂತೆ ಸರ್ಕಾರದ ಹಲವಾರು ಅಕಾಡೆಮಿ, ಸಮಿತಿ ಹೀಗೆ ವಿವಿಧ ಜವಾಬ್ದಾರಿತ ಸ್ಥಾನಗಳನ್ನು ನಿರ್ವಹಿಸಿದ್ದಾರೆ.  ಕೃತಿಗಳು: ಬೆಂಕಿ-ನೀರು, ಹಸಿದ ನೆಲ, ಸೂರ್ಯ, ...

READ MORE

Related Books