ಸ್ವರ ಗಂಧರ್ವ

Author : ಸಿರಿಗೇರಿ ಯರಿಸ್ವಾಮಿ

Pages 230

₹ 200.00




Year of Publication: 2020
Published by: ಅನ್ನಪೂರ್ಣ ಪ್ರಕಾಶನ
Address: ಸಿರಿಗೇರಿ-583120, ಸಿರಗುಪ್ಪಾ ತಾಲೂಕು, ಬಳ್ಳಾರಿ ಜಿಲ್ಲೆ

Synopsys

ಲೇಖಕ ಸಿರಿಗೇರಿ ಯರಿಸ್ವಾಮಿ ಅವರ ಸಂಪಾದಿತ ಕೃತಿ-ಸ್ವರ ಗಂಧರ್ವ. ಕನ್ನಡ ಚಲನಚಿತ್ರ ರಂಗದ ಹೆಸರಾಂತ ಗಾಯಕ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಗಾಯನದ ಸಾಧನೆಗಳನ್ನು ಕೇಂದ್ರವಾಗಿಟ್ಟುಕೊಂಡು ರಚಿಸಿದ ಕೃತಿ ಇದು. ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ ಅವರು ‘ಎಸ್ ಪಿಬಿ’ ಎಂದೇ ಖ್ಯಾತಿ. ತೆಲುಗು ಹಾಗೂ ತಮಿಳುನಾಡು ಚಲನಚಿತ್ರರಂಗಗಳಲ್ಲೂ ಅಸಂಖ್ಯ ಗೀತೆಗಳನ್ನು ಹಾಡಿದ್ದ, ಅದ್ವಿತೀಯರು. ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯಲ್ಲೂ ತಮ್ಮದೇ ಛಾಪೂ ಮೂಡಿಸಿದವರು. ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಗ್ರಾಮದ ಸಂಪ್ರದಾಯಸ್ಥ ಮನೆತನದವರು. ವ್ಯವಸ್ಥಿತವಾಗಿ ಸಂಗೀತ ಕಲಿಯದಿದ್ದರೂ ಗಾಯನದಲ್ಲಿ ಅದ್ಭುತ ಸಾಧನೆ ಮಾಡಿದವರು. ಇಂತಹ ಸಾಧನೆಗಳ ಆಯಾಮಗಳನ್ನು ಪರಿಚಯಿಸುವ ಬರಹಗಳನ್ನು ಸಂಪಾದಿಸಲಾಗಿದೆ.

About the Author

ಸಿರಿಗೇರಿ ಯರಿಸ್ವಾಮಿ

ಲೇಖಕ ಸಿರಿಗೇರಿ ಯರಿಸ್ವಾಮಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಸಿರಿಗೇರಿಯವರು. ತಂದೆ ವಿರುಪಾಕ್ಷಯ್ಯ, ತಾಯಿ ಅನ್ನಪೂರ್ಣಮ್ಮ, ಎಂ.ಎ, ಬಿ.ಇಡಿ ಪದವೀಧರರು. 16 ಸ್ವತಂತ್ರ ಕೃತಿಗಳು, ತಮ್ಮ ಅನ್ನಪೂರ್ಣ ಪ್ರಕಾಶನದ ಮೂಲಕ  67 ಕೃತಿಗಳನ್ನು ಪ್ರಕಾಶಿಸಿದ್ದಾರೆ. 37 ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯಿಂದ (2017) ಇವರ ಪುಸ್ತಕಕ್ಕೆ ಬಹುಮಾನ ಲಭಿಸಿದೆ.  ಕೃತಿಗಳು: ಸ್ವರ ಗಂಧರ್ವ (ಸಂಪಾದನೆ), ಸಮ್ಮೇಳನಾಧ್ಯಕ್ಷರ ಭಾಷಣಗಳು (ಸಂಪಾದನೆ), ರಂಗಸಂಭ್ರಮ (ಅಂಕಣಗಳ ಬರಹ), ಬೆಟ್ಟದ ಹೂವು (ಸಂ), ದೊಡ್ಮನೆ ಅಮ್ಮ (ಸಂ), ಸ್ನೇಹಶೀಲ.  ...

READ MORE

Related Books