ಸ್ವರ್ಣಮಂದಿರ

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

Pages 208

₹ 95.00




Year of Publication: 2008
Published by: ಸುಧಾ ಎಂಟರ್ ಪ್ರೈಸಸ್
Address: 761,8ನೇ ಮುಖ್ಯರಸ್ತೆ, 3ನೇ ಬ್ಲಾಕ್, ಕೋರಮಂಗಲ, ಬೆಂಗಳೂರು-34

Synopsys

ಕಾದಂಬರಿಗಾರ್ತಿ ಸಾಯಿಸುತೆ ಅವರ ಸಾಮಾಜಿಕ ಕಾದಂಬರಿ ‘ಸ್ವರ್ಣ ಮಂದಿರ’. ಕೃತಿಯ ಬೆನ್ನುಡಿಯಲ್ಲಿ ಲೇಖಕಿಯೇ ಹೇಳಿರುವಂತ,’ಸಾಮಾಜಿಕ ಸಂಬಂಧಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿರಿಯರು ಕೆಲವು ನೈತಿಕ ನಿಬಂಧನೆಗಳನ್ನು ಹಾಕಿದ್ದಾರೆ. ‘ನಾತಿ ಚರಾಮಿ’ ಇದೊಂದು ಮುಖ್ಯವಾದ ನಿಬಂಧನೆ. ಎಲ್ಲೋ ಒಂದು ಕಡೆ ಎಡವಬೇಕಾಗುತ್ತದೆ. ಆಗ ಕೂಡ ವಿವೇಕವನ್ನು ಕಳೆದುಕೊಳ್ಳದೆ ನೈಪುಣ್ಯತೆಯಿಂದ ಸಾಮಾಜಿಕ ನ್ಯಾಯವನ್ನು ಗೌರವಿಸಬೇಕಾಗುತ್ತದೆ. ಕೆಲವೊಮ್ಮೆ ದ್ವಂದ್ವ ಪ್ರವೃತ್ತಿ ಅನೇಕ ಸಂಕಷ್ಟಗಳಿಗೆ ದೂಡುತ್ತದೆ’ ಎಂದಿದ್ದಾರೆ. 1991ರಲ್ಲಿ ಮೊದಲ ಮುದ್ರಣ ಕಂಡ ಈ ಕಾದಂಬರಿ 2008ರಲ್ಲಿ ಎರಡನೇ ಮುದ್ರಣ ಕಂಡಿದೆ. 

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books