ಸ್ವಾತಂತ್ರ್ಯ ಹೋರಾಟ ಮತ್ತು ಲಾವಣಿ ಸಾಹಿತ್ಯ

Author : ಬಸವರಾಜ ಮಲಶೆಟ್ಟಿ

Pages 28

₹ 30.00




Year of Publication: 2017
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ, ಹಂಪಿ-583276

Synopsys

ಲಾವಣಿಗಳು ಉತ್ತರ ಕರ್ನಾಟಕದ ಒಂದು ಜನಪ್ರಿಯ ಗೀತ ಪ್ರಕಾರ, ಈ ಶೃಂಗಾರ ರಸ ಪ್ರಧಾನವಾದ ಲಾವಣಿಗಳು 1900ರಲ್ಲಿ ಮರಾಠಿ ಲಾವಣಿಕಾರರ ಮೂಲಕ ನಾಡಿನಲ್ಲಿ ರಾಷ್ಟ್ರೀಯ ಭಾವನ ಮೊಳಗಿಸುವುದಕ್ಕೆ ಬಳಕೆಯಾದ ಬಗ್ಗೆ ಈ ಕೃತಿಯಲ್ಲಿ ಸಾಕಷ್ಟು ಮಾಹಿತಿಗಳಿದ್ದು ಲಾವಣಿಗಳು ಕರ್ನಾಟಕದಲ್ಲಿ ರಾಷ್ಟ್ರೀಯ ಭಾವನೆಗಳನ್ನು ಹುಟ್ಟುಹಾಕುವುದರ ಜತೆಗೆ ಆಧ್ಯಾತ್ಮಿಕ, ಸಾಮಾಜಿಕ, ಧಾರ್ಮಿಕ, ನೈತಿಕ ವಿಷಯಗಳ ಬಗೆಗೂ ಜನತೆಯನ್ನು. ಜಾಗೃತಗೊಳಿಸುವಲ್ಲಿ ವಹಿಸಿದ ಪಾತ್ರದ ಬಗ್ಗೆಯೂ ಈ ಕೃತಿಯಲ್ಲಿ ಚರ್ಚಿಸಲಾಗಿದೆ.

ಕನ್ನಡ ವಿಶ್ವವಿದ್ಯಾಲಯದ ಬೆಳ್ಳಿ ಹಬ್ಬದ ಅಂಗವಾಗಿ ’ಸ್ವಾತಂತ್ಯ್ರ ಹೋರಾಟ ಮತ್ತು ಲಾವಣಿ ಸಾಹಿತ್ಯ’ 2017 ರಲ್ಲಿ ಮರುಮುದ್ರಣಗೊಂಡಿದೆ. ಮೊದಲ ಮುದ್ರಣವು 1998ರಲ್ಲಿ ಕಂಡಿತ್ತು. ಜಗತ್ತಿಗೆ ಕನ್ನಡ ಸಾಹಿತ್ಯ ಹೇಳುವುದು ಸಾಕಷ್ಟಿದೆ. ಆ ಪೈಕಿ, ಲಾವಣಿ ಸಾಹಿತ್ಯವೂ ಒಂದು. ಭಾರತದ ಸ್ವಾತಂತ್ಯ್ರ ಹೋರಾಟದ ಸಂದರ್ಭದಲ್ಲಿ ಸಾಂಸ್ಖೃತಿಕವಾಗಿ ಲಾವಣಿ ಸಾಹಿತ್ಯ ನೀಡಿದ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ, ’ಸ್ವಾತಂತ್ರ್ಯ ಹೋರಾಟ ಮತ್ತು ಲಾವಣಿ ಸಾಹಿತ್ಯ’ ಕೃತಿಯು ಮಹತ್ವ ಪಡೆಯುತ್ತದೆ.

About the Author

ಬಸವರಾಜ ಮಲಶೆಟ್ಟಿ
(10 August 1949 - 29 June 2014)

ಜಾನಪದ ತಜ್ಞರಾಗಿದ್ದ ಡಾ. ಬಸವರಾಜ ಮಲಶೆಟ್ಟಿ ಅವರು ಉತ್ತರ ಕರ್ನಾಟಕದ ಬಯಲಾಟಕ್ಕೆ ವಿಶಿಷ್ಟ ಸ್ಪರ್ಶ ನೀಡಿದವರು. ರಂಗಭೂಮಿ, ಸಂಗೀತ ಕ್ಷೇತ್ರದಲ್ಲಿ ಅಪಾರ ಪರಿಣಿತಿ ಹೊಂದಿದ್ದ ಮಲಶೆಟ್ಟಿ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ತಿಗಡೊಳ್ಳಿಯವರು. ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದ ಅವರು ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು. ಬಸವರಾಜ ಮಲಶೆಟ್ಟಿಯವರು ಜನಿಸಿದ್ದ 1949ರ ಆಗಸ್ಟ್‌ 10ರಂದು ತಂದೆ ಮರಿಕಲ್ಲಪ್ಪ, ತಾಯಿ ನಾಗೇಂದ್ರವ್ವ. ಬಾಲ್ಯದ ದಿನಗಳಲ್ಲಿಯೇ ರಂಗಭೂಮಿಯ ಒಡನಾಟ ಆರಂಭವಾಯಿತು. ತಂದೆಯ ಜೊತೆಯಲ್ಲಿ ಆಟಕ್ಕೆ ಹೋಗುತ್ತಿದ್ದ ಬಸವರಾಜ ಅವರು ಬಯಲಾಟದಲ್ಲಿ ಪಾತ್ರಧಾರಿಯಾಗಿ ಬಣ್ಣ ಹಚ್ಚಿದ್ದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ...

READ MORE

Related Books