ಸ್ವಯಂವೈದ್ಯ

Author : ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿ (ತಿರುಕ)

Pages 640

₹ 400.00




Year of Publication: 2012
Published by: ಅನಾಥಸೇವಾಶ್ರಮ ವಿಶ್ವಸ್ತ ಸಮಿತಿ,
Address: # ಮಲ್ಲಾಡಿಹಳ್ಳಿ - 577531, ಹೊಳಲ್ಕೆರೆ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ

Synopsys

ಸ್ವಯಂ ವೈದ್ಯ ಎಂಬುದು ರಾಘವೇಂದ್ರ ಗುರೂಜಿ (ತಿರುಕ) ಅವರು ಬರೆದ ಕೃತಿ. ರೋಗ ಬಂದಾಗ ವೈದ್ಯರ ಬಳಿಗೆ ಹೋಗುವುದು ಸಾಮಾನ್ಯ. ಆದರೆ, ರೋಗವೇ ಬರದಂತೆ ನೋಡಿಕೊಳ್ಳುವುದು ಉತ್ತಮವಲ್ಲವೆ? ಗುರೂಜಿ ಅವರು ಸ್ವತಃ ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು ಎಂಬ ಸದುದ್ದೇಶದೊಂದಿಗೆ ಈ ಕೃತಿ ರಚಿಸಿದ್ದು, ಮನೆಯ ಸುತ್ತಮುತ್ತ ದೊರಕುವ ಎಲೆಬಳ್ಳಿಗಳು, ಗಿಡಮರಗಳ ಬಗ್ಗೆ ತಿಳಿದಿರಬೇಕು. ಅವು ಅಗತ್ಯ ಔಷಧಿಯನ್ನು ಪೂರೈಸುತ್ತವೆ. ಎಲ್ಲಕ್ಕಿಂತ ಮಿಗಿಲಾಗಿ, ಆಪತ್ತಿನ ಸಮಯದಲ್ಲಿ ಆತ್ಮರಕ್ಷಣೆಯನ್ನೆಲ್ಲ, ನೆರೆಯವರಿಗೆ ಉಪಕಾರಿಯಾಗಬಲ್ಲ ಎಂಬ ಆತ್ಮವಿಶ್ವಾಸವನ್ನು ಕನ್ನಡಿಗರಲ್ಲಿ ಮೂಡಿಸುವ ಜನಕಲ್ಯಾಣದ ಸದುದ್ದೇಶದಿಂದ ರಚಿತವಾದ ದೀರ್ಘ ಅಧ್ಯಯನ, ಸಂಶೋಧನೆ, ಪ್ರಯೋಗಗಳ ರಸಭಟ್ಟಿಯಾದ ಗ್ರಂಥ ‘ಸ್ವಯಂವೈದ್ಯ‘ ಆಗಿದೆ. .

About the Author

ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿ (ತಿರುಕ)
(18 March 1891 - 04 August 1996)

ಕೇರಳದಲ್ಲಿ ಹುಟ್ಟಿ, ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿ ಹಳ್ಳಿಯಲ್ಲಿದ್ದು, ತಿರುಕ ಎಂ ಕಾವ್ಯನಾಮದೊಂದಿಗೆ ಬೆಳೆದವರು. ತಂದೆ ಅನಂತ ಪದ್ಮನಾಭ ನಂಬೂದರಿ, ತಾಯಿ ಪದ್ಮಂಬಾಳ್. ಈ ಮಗುವಿಗೆ ದೇಹ ವಿಕಾರ ಹಾಗೂ ಮೆದುಳಿನ ಬೆಳವಣಿಗೆ ಸರಿಯಾಗಿರಲಿಲ್ಲ. ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ದಂಪತಿ ಬಾರಕೂರಿನಲ್ಲಿ ತಂಗಿದ್ದರು. ಆ ಹಾದಿಯಲ್ಲಿ ಉಡುಪಿಗೆ ಹೊರಟಿದ್ದ ಮಂತ್ರಾಲಯದ ಪೀಠಸ್ಥ ಸ್ವಾಮಿಗಳು ಈ ಮಗುವನ್ನು ಕಂಡು ಕೀರ್ತಿವಂತನಾಗುವುದಾಗಿ ಹರಸುತ್ತಾರೆ.  ತಂದೆ ಈ ಮಗುವನ್ನು ಸಾಕಲಾಗದೆ ಅತಿಥೇಯರಾಗಿದ್ದ ನರಸಿಂಹಯ್ಯ – ಪುತಲೀ ಬಾಯಿ ಅವರಿಗೆ ದತ್ಯತು ಕೊಟ್ಟು ಯಾತ್ರೆ ಹೊರಡುತ್ತಾರೆ. ಈ ಮಗು ಮುಂದೆ ರಾಘವೇಂದ್ರ ಎಂದು ನಾಮಕರಣವಾಗುತ್ತದೆ. ಕುಂದಾಪುರದ ಶಾಲೆಗೆ. ...

READ MORE

Related Books